Webdunia - Bharat's app for daily news and videos

Install App

ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಪಟ್ಟ ತ್ಯಜಿಸಲು ಧೋನಿ ಒಲವು

Webdunia
ಶನಿವಾರ, 29 ಮಾರ್ಚ್ 2014 (12:10 IST)
PR
PR
ಮುಂಬೈ: ಭಾರತ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಪಟ್ಟಕ್ಕೆ ರಾಜೀನಾಮೆ ನೀಡುವ ಪ್ರಸ್ತಾಪ ಮಂಡಿಸಿದ್ದಾರೆ. ಐಪಿಎಲ್ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ಹಗರಣದ ಹಿನ್ನೆಲೆಯಲ್ಲಿ ಧೋನಿ ರಾಜೀನಾಮೆ ನೀಡುವ ತೀರ್ಮಾನಕ್ಕೆ ಬಂದಿದ್ದಾರೆ. ಈ ಹಗರಣದೊಂದಿಗೆ ಅವರ ಹೆಸರು ತಳಕುಹಾಕಿಕೊಂಡಿದ್ದರಿಂದ ಅವರು ಸಿಟ್ಟಾಗಿದ್ದು, ಎನ್.ಶ್ರೀನಿವಾಸನ್ ಅವರಿಗೆ ತಾವು ನಾಯಕತ್ವ ತ್ಯಜಿಸುವ ಪ್ರಸ್ತಾಪ ಮಾಡಿದ್ದಾರೆ. ಆದರೆ ಶ್ರೀನಿವಾಸನ್ ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲವೆಂದು ತಿಳಿದುಬಂದಿದೆ.

ಸುಪ್ರೀಕೋರ್ಟ್‌ನಲ್ಲಿ ಗುರುವಾರ ಐಪಿಎಲ್ ಹಗರಣದ ವಿಚಾರಣೆಯಲ್ಲಿ ಧೋನಿ ಹೆಸರನ್ನು ಪ್ರಸ್ತಾಪಿಸಲಾಯಿತು.ಅರ್ಜಿದಾರರ ಪರ ವಕೀಲ ಹರೀಶ್ ಸಾಳ್ವೆ ಧೋನಿ ತನಿಖಾ ಸಮಿತಿಯ ಮುಂದೆ ಸುಳ್ಳು ಹೇಳಿಕೆ ನೀಡಿದ್ದಾರೆಂದು ಆರೋಪಿಸಿದ್ದರು.ಗುರುನಾಥ್ ಮೇಯಪ್ಪನ್ ಕೇವಲ ಕ್ರಿಕೆಟ್ ಉತ್ಸಾಹಿ ಎಂದು ಧೋನಿ ಹೇಳಿಕೆ ನೀಡುವ ಮೂಲಕ ಸುಳ್ಳುಹೇಳಿದ್ದಾರೆ ಎಂದು ಅವರು ಆರೋಪಿಸಿದರು.

ಶುಕ್ರವಾರ ಬಿಸಿಸಿಐ ಹಿರಿಯ ವಕೀಲ ಧೋನಿಯನ್ನು ಸಮರ್ಥಿಸಿಕೊಂಡು ಮಾತನಾಡಿ, ಐಪಿಎಲ್ ತನಿಖಾ ಸಮಿತಿಯ ಮುಂದೆ ಧೋನಿ ಸುಳ್ಳು ಹೇಳಿಲ್ಲ ಎಂದು ವಾದಿಸಿದ್ದರು.ಹಿಂದೆ ಕೂಡ ಧೋನಿ ವಿರುದ್ಧ ಸಂಘರ್ಷ ಹಿತಾಸಕ್ತಿ ಆರೋಪ ಮಾಡಲಾಗಿತ್ತು. ಭಾರತದ ನಾಯಕ ಇಂಡಿಯನ್ ಸಿಮೆಂಟ್ಸ್ ಉದ್ಯೋಗಿಯಾಗಿದ್ದು, ಈ ಕಂಪೆನಿಯ ಮಾಲೀಕರು ಸಿಎಸ್‌ಕೆ ಫ್ರಾಂಚೈಸಿಯಾಗಿದ್ದಾರೆ. ಶ್ರೀನಿವಾಸನ್ ಈ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರು.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments