Webdunia - Bharat's app for daily news and videos

Install App

ಧೋನಿ ವಿರುದ್ಧ ಸುಳ್ಳು ಆರೋಪಗಳು: ಬಿಸಿಸಿಐ ಸ್ಪಷ್ಟನೆ

Webdunia
ಶುಕ್ರವಾರ, 28 ಮಾರ್ಚ್ 2014 (15:01 IST)
PR
PR
ನವದೆಹಲಿ: ಐಪಿಎಲ್ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಭಾರತ ತಂಡದ ನಾಯಕ ಧೋನಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ ಎಂದು ಭಾರತ ಕ್ರಿಕೆಟ್ ಮಂಡಳಿ ಸುಪ್ರೀಂಕೋರ್ಟ್‌ ನ್ಯಾಯಾಧೀಶರಿಗೆ ತಿಳಿಸಿದೆ. ತನಿಖೆಯ ಸಂದರ್ಭದಲ್ಲಿ ಶ್ರೀನಿವಾಸನ್ ಅಳಿಯ ಮೇಯಪ್ಪನ್ ಪಾತ್ರದ ಬಗ್ಗೆ ಧೋನಿ ಮಾತನಾಡುತ್ತಾ ಮೇಯಪ್ಪನ್ ಕೇವಲ ಕ್ರಿಕೆಟ್ ಪ್ರೇಮಿ ಎಂದು ಬಣ್ಣಿಸುವ ಮೂಲಕ ಸುಳ್ಳು ಹೇಳಿದ್ದಾರೆಂದು ಸರ್ಕಾರಿ ವಕೀಲ ಹರೀಶ್ ಸಾಳ್ವೆ ವಾದಿಸಿದ್ದರು.ಧೋನಿ ಅಂತಹ ಹೇಳಿಕೆಯನ್ನು ನೀಡಿಲ್ಲ ಎಂದು ಬಿಸಿಸಿಐ ವಕೀಲರು ಇಂದು ಸ್ಪಷ್ಟಪಡಿಸಿದರು.

ಶ್ರೀನಿವಾಸನ್ ಬಿಸಿಸಿಐ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿಯಬೇಕೆಂದೂ ಅವರ ಬದಲಿಗೆ ಗವಾಸ್ಕರ್ ಬಿಸಿಸಿಐ ಹಂಗಾಮಿ ಅಧ್ಯಕ್ಷರಾಗಿ ಏಪ್ರಿಲ್ 16ರಿಂದ ಆರಂಭವಾಗುವ ಐಪಿಎಲ್ ಪಂದ್ಯಾವಳಿಯ ಉಸ್ತುವಾರಿ ವಹಿಸಬೇಕೆಂದೂ ಸುಪ್ರೀಂಕೋರ್ಟ್ ಇಂದು ತಿಳಿಸಿದೆ.ಮುಂದಿನ ಆದೇಶದವರೆಗೆ ಬಿಸಿಸಿಐ ಉಪಾಧ್ಯಕ್ಷ ಶಿವಲಾಲ್ ಯಾದವ್ ಎಲ್ಲ ಐಪಿಎಲ್ ಯೇತರ ವ್ಯವಹಾರಗಳನ್ನು ನಿರ್ವಹಿಸಲಿದ್ದಾರೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

ಹೊಸ ಪಾತ್ರದಲ್ಲಿ ಸಂಘರ್ಘ ಹಿತಾಸಕ್ತಿಯನ್ನು ತಪ್ಪಿಸಲು ಟೆಲಿವಿಷನ್ ವೀಕ್ಷಕವಿವರಣೆಕಾರ ಹುದ್ದೆಯಿಂದ ಕೆಳಕ್ಕಿಳಿಯಬೇಕೆಂದೂ ಗವಾಸ್ಕರ್ ಅವರಿಗೆ ಕೋರ್ಟ್ ತಿಳಿಸಿದ್ದು, ಸಂಪಾದನೆ ನಷ್ಟಕ್ಕೆ ಸೂಕ್ತವಾಗಿ ಪರಿಹಾರ ನೀಡಬೇಕು ಎಂದು ಬಿಸಿಸಿಐಗೆ ತಿಳಿಸಿದೆ.ಈ ವರ್ಷ ಐಪಿಎಲ್ ಏಪ್ರಿಲ್ 16ರಂದು ಆರಂಭವಾಗಲಿದ್ದು, ಯುನೈಟೆಡ್ ಅರಬೈ ಎಮಿರೇಟ್ಸ್‌ನಲ್ಲಿ ಆರಂಭಿಕ ಸುತ್ತಿನ ಪಂದ್ಯಗಳು ನಡೆಯಲಿವೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments