Webdunia - Bharat's app for daily news and videos

Install App

ನಾಯಕತ್ವ ತ್ಯಜಿಸದಂತೆ ಸಚಿನ್ ಮನವೊಲಿಸಿದ್ದ ಪತ್ನಿ ಅಂಜಲಿ

Webdunia
ಶುಕ್ರವಾರ, 28 ಅಕ್ಟೋಬರ್ 2011 (12:24 IST)
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಿಂದೊಮ್ಮೆ ಭಾರತೀಯ ತಂಡದ ನಾಯಕತ್ವ ವಹಿಸಿಕೊಂಡಿದ್ದ ಸಂದರ್ಭದಲ್ಲಿ ತಂಡದ ಹೀನಾಯ ಪ್ರದರ್ಶನದಿಂದ ಬೆಸತ್ತು ತಮ್ಮ ಕಪ್ತಾನಗಿರಿಗೆ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಇಂತಹ ಸಂದರ್ಭದಲ್ಲಿ ಸಚಿನ್ ಮನವೊಲಿಸಲು ಪತ್ನಿ ಅಂಜಲಿ ಅವರಿಂದ ಮಾತ್ರ ಸಾಧ್ಯವಾಗಿತ್ತು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾಜಿ ಕಾರ್ಯದರ್ಶಿ ಜಯವಂತ್ ಲೇಲೆ ನೂತನವಾಗಿ ಬಿಡುಗಡೆ ಮಾಡಿರುವ 'ಐ ವಾಸ್ ದೇರ್- ಮೆಮೋರೀಸ್ ಆಫ್ ಎ ಕ್ರಿಕೆಟ್ ಆಡ್ಮಿನಿಸ್ಟ್ರೇಟರ್' ಪುಸ್ತಕದಲ್ಲಿ ಬರೆದಿದ್ದಾರೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ನಾಯಕತ್ವದಲ್ಲಿ ಸಚಿನ್ ಯಶಸ್ವಿಯಾಗಿರಲಿಲ್ಲ. ಇದರಂತೆ 1999-2000ನೇ ಋತುವಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆದ ಸರಣಿಯಲ್ಲಿ ಭಾರತ ತೀರಾ ಕಳಪೆ ಮಟ್ಟದ ಪ್ರದರ್ಶನ ನೀಡಿತ್ತು. ಮೊದಲ ಪಂದ್ಯವನ್ನು ಬಹುತೇಕ ಮೂರು ದಿನಗಳಲ್ಲೇ ಭಾರತ ಕಳೆದುಕೊಂಡಿತ್ತು.

ಇದರಿಂದ ಮಾನಸಿಕವಾಗಿ ತೀವ್ರ ನೊಂದಿದ್ದ ಸಚಿನ್ ತಮ್ಮ ರಾಜೀನಾಮೆಗೆ ಮುಂದಾಗಿದ್ದರು. ಆದರೆ ಬೆಂಗಳೂರಿನಲ್ಲಿ ನಡೆಯಲಿರುವ ಎರಡನೇ ಪಂದ್ಯಕ್ಕೆ ಕೆಲವೇ ದಿನಗಳಿರುವಾಗ ಸಚಿನ್ ಅವರ ಇಂತಹದೊಂದು ನಿರ್ಧಾರವು ಭಾರಿ ಆಘಾತ ತರುವಂತಾಗಿತ್ತು.

ಇಂತಹ ಪರಿಸ್ಥಿತಿಯಲ್ಲಿ ಸಚಿನ್ ಮನವೊಲಿಸಲು ಬಿಸಿಸಿಐ ಮುಖ್ಯಸ್ಥ ರಾಜಸಿಂಗ್ ಡುಂಗರ್‌ಪುರ್ ಹಾಗೂ ಮಾಜಿ ಆಲ್‌ರೌಂಡರ್ ರವಿ ಶಾಸ್ತ್ರಿ ಯತ್ನಿಸಿದ್ದರೂ ಸಹ ವಿಫಲವಾಗಿದ್ದರು. ಆದರೆ ಕೊನೆಗೆ ಅಂಜಲಿ ಕೋರಿಕೆಯ ನಂತರ ಸಚಿನ್ ತಮ್ಮ ನಿರ್ಧಾರ ವಾಪಾಸ್ ಪಡೆಯುವಂತಾಗಿತ್ತು ಎಂದು ಪುಸ್ತಕದಲ್ಲಿ ಬರೆಯಲಾಗಿದೆ.

ವೆಬ್‌ದುನಿಯಾ ಕನ್ನಡ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments