Webdunia - Bharat's app for daily news and videos

Install App

ರಣಜಿ ಟ್ರೋಫಿ ಗೆದ್ದ ಕರ್ನಾಟಕ ಕ್ರಿಕೆಟ್ ತಂಡಕ್ಕೆ ಅದ್ಧೂರಿ ಸ್ವಾಗತ

Webdunia
ಸೋಮವಾರ, 3 ಫೆಬ್ರವರಿ 2014 (14:21 IST)
PR
PR
ಬೆಂಗಳೂರು: 15 ವರ್ಷಗಳ ನಂತರ ರಣಜಿಟ್ರೋಫಿಯನ್ನು ಗೆದ್ದುಬಂದಿರುವ ರಾಜ್ಯ ಕ್ರಿಕೆಟ್ ತಂಡದ ಆಟಗಾರರಿಗೆ ಅದ್ಧೂರಿ ಸ್ವಾಗತವನ್ನು ಸೋಮವಾರ ನೀಡಲಾಯಿತು. ಹೈದರಾಬಾದಿನಿಂದ ಇಂದು ದೇವನಹಳ್ಳಿ ವಿಮಾನನಿಲ್ದಾಣಕ್ಕೆ ರಾಜ್ಯ ಆಟಗಾರರು ಬಂದಿಳಿದರು. ಕೆಲವೇ ಹೊತ್ತಿನಲ್ಲಿ ರಾಜ್ಯ ತಂಡ ಚಿನ್ನಸ್ವಾಮಿ ಸ್ಟೇಡಿಯಂಗೆ ಆಗಮಿಸಿತು. ಮಹಾರಾಷ್ಟ್ರದ ವಿರುದ್ಧ ಫೈನಲ್ಸ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ರಣಜಿ ಟ್ರೋಫಿಯನ್ನು ಗೆದ್ದಿರುವ ಕರ್ನಾಟಕ ತಂಡ ಈ ಬಾರಿ ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಅತ್ಯುನ್ನತ ಪ್ರದರ್ಶನ ನೀಡಿದೆ.

ಕರ್ನಾಟಕದ ನಾಯಕ ವಿನಯ್ ಕುಮಾರ್ ಟ್ರೋಫಿಯನ್ನು ಎತ್ತಿಹಿಡಿದು ಪ್ರದರ್ಶಿಸಿದಾಗ ಸಂಭ್ರಮ ಮುಗಿಲು ಮುಟ್ಟಿತು. ರಣಜಿ ಟ್ರೋಫಿ ಗೆದ್ದಿರುವ ತಂಡಕ್ಕೆ 2 ಕೋಟಿ ರೂ. ಬಹುಮಾನ ಸಿಗಲಿದ್ದು, ಕರ್ನಾಟಕ ಸರ್ಕಾರ ಕೂಡ ಒಂದು ಕೋಟಿ ರೂ. ಬಹುಮಾನ ಘೋಷಿಸಿದೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments