Webdunia - Bharat's app for daily news and videos

Install App

ಶ್ರೀಲಂಕಾ ತಂಡಕ್ಕೆ ಹೆಚ್ಚಿದ ಭದ್ರತೆ

Webdunia
ಸೋಮವಾರ, 4 ಫೆಬ್ರವರಿ 2008 (13:44 IST)
ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಶ್ರೀಲಂಕಾ ತಂಡಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾವು ಭದ್ರತೆಯನ್ನು ಹೆಚ್ಚಿಸಿದ್ದು, ಆಸ್ಟ್ರೇಲಿಯಾ ಪ್ರೇಕ್ಷಕರಿಂದ ಅನುಚಿತ ಕ್ರಮಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದೆ.

ತ್ರಿಕೋನ ಸರಣಿಗಾಗಿ ಅಭ್ಯಾಸ ಮಾಡಿ ಹೊಟೇಲಿಗೆ ಹಿಂದಿರುಗುತ್ತಿದ್ದ ಶ್ರೀಲಂಕಾ ತಂಡದ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ಗುಂಪೊಂದು ಮೊಟ್ಟೆ ಎಸೆದು ಅವಮಾನ ಮಾಡಿದ ನಂತರ ಮುನ್ನೆಚ್ಚರಿಕೆ ವಹಿಸಿರುವ ಸಿಎ ಶ್ರೀಲಂಕಾ ತಂಡದ ಭದ್ರತೆ ಕಡೆ ಗಮನ ಹರಿಸಿದೆ.

ಶ್ರೀಲಂಕಾ ತಂಡದ ಕೋಚ್ ಟ್ರೆವರ್ ಬಿಲೀಸ್ ಅವರು ಇದು ಗಂಭೀರ ವಿಷಯವಲ್ಲ, ಇಂತಹ ಪ್ರಕರಣಗಳು ಆಸ್ಟ್ರೇಲಿಯಾದಲ್ಲಿ ಸಾಮಾನ್ಯವಾಗಿ ನಡೆಯುತ್ತಲೇ ಇರುತ್ತದೆ, ಇದು ಪುಂಡಾಟಿಕೆ ಮತ್ತು ಮೂರ್ಖತನದ ಕೆಲಸವಾಗಿದ್ದು, ಪತ್ರಿಕೆಗಳಲ್ಲಿ ದೊಡ್ಡ ವಿಷಯವಾಗುವುದು ಬೇಡ. ಇದು ಮುರಳಿ ಅವರನ್ನು ಗುರಿಯಾಗಿಸಿ ಮಾಡಿದೆ ಕೆಲಸವಲ್ಲ ಎಂದು ಹೇಳಿದ್ದಾರೆ.

ಆದರೆ ಈ ಕುರಿತು ಹೆಚ್ಚಿನ ತಲೆ ಕೆಡಿಸಿಕೊಂಡಿರುವ ಸಿಎ, ಶ್ರೀಲಂಕಾ ತಂಡ ಉಳಿದಿರುವ ಹೊಟೇಲಿನ ಸುತ್ತ ಹೆಚ್ಚಿನ ಭದ್ರತೆಯನ್ನು ಹಾಕಿದೆ.

ಈ ಕುರಿತು ಪ್ರತಿಕ್ರಿಯಿಸಿದ ಸಿಎ ಯ ವಕ್ತಾರ ಪೀಟರ್ ಯಂಗ್, ಶ್ರೀಲಂಕಾ ತಂಡಕ್ಕೆ ಹೆಚ್ಚಿನ ಭದ್ರತೆಯನ್ನು ಹಾಕಿರುವ ಬಗ್ಗೆ ಅಭಿಮಾನಿಗಳು ತಿಳಿದಿರಲಿ. ಅದೇ ರೀತಿ ಇಂತಹ ಕೃತ್ಯಕ್ಕಾಗಿ ಕ್ರಿಕೆಟ್ ಆಸ್ಟ್ರೇಲಿಯಾವು ಶ್ರೀಲಂಕಾದ ಆಯ್ಕೆದಾರರ ಕ್ಷಮೆ ಕೇಳುತ್ತಿದ್ದೇವೆ ಎಂದು ಹೇಳಿದ್ದಾರೆ.

ಆಸ್ಟ್ರೇಲಿಯಾ ನಾಯಕ ರಿಕಿ ಪಾಂಟಿಂಗ್ ಕೂಡಾ, ಅತಿಥಿ ತಂಡಗಳೊಡನೆ ಉತ್ತಮವಾಗಿ ನಡೆದುಕೊಳ್ಳಿ ಎಂದು ಪ್ರೇಕ್ಷಕರಲ್ಲಿ ಮನವಿ ಮಾಡಿದ್ದಾರೆ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

Show comments