Webdunia - Bharat's app for daily news and videos

Install App

ಸ್ಪಾಟ್‌ ಫಿಕ್ಸಿಂಗ್‌: ಶಿಲ್ಪಾಶೆಟ್ಟಿ ಪತಿ ಕುಂದ್ರಾಗೆ ಕಂಟಕ

Webdunia
ಸೋಮವಾರ, 1 ಜುಲೈ 2013 (14:22 IST)
PTI
ಸ್ಪಾಟ್‌ ಫಿಕ್ಸಿಂಗ್‌ ಪ್ರಕರಣವನ್ನು ಭೇದಿಸಿದ ದೆಹಲಿ ಪೊಲೀಸರು ಅಮಾನತುಗೊಂಡಿರುವ ರಾಜಸ್ಥಾನ್‌ ರಾಯಲ್ಸ್‌ ತಂಡದ ಮಾಲೀಕ ಹಾಗೂ ಬಾಲಿವುಡ್‌ ಶಿಲ್ಪಾಶೆಟ್ಟಿ ಪತಿ ರಾಜ್‌ಕುಂದ್ರಾ ಅವರ ಬೆಟ್ಟಿಂಗ್‌ ಪ್ರಕರಣದ ತನಿಖೆ ನಡೆಸುವಂತೆ ಜೈಪುರ ಪೊಲೀಸರಿಗೆ ಮನವಿ ಮಾಡಿದ್ದಾರೆ.

ರಾಜ್‌ ಕುಂದ್ರಾ ಬೆಟ್‌ ಕಟ್ಟಿದ ಐಪಿಎಲ್‌ ಪಂದ್ಯಗಳು ಜೈಪುರದಲ್ಲಿ ನಡೆದಿವೆ. ಹಾಗಾಗಿ ಈ ಪ್ರಕರಣವನ್ನು ಜೈಪುರ ಪೊಲೀಸರು ನಡೆಸುವಂತೆ ಮನವಿ ಮಾಡಿದ್ದಾರೆ. ಈ ಮೂಲಕ ದೆಹಲಿ ಪೊಲೀಸರು ಪ್ರಕರಣದಿಂದ ಕೈ ತೊಳೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

ಕುತೂಹಲದ ಅಂಶವೆಂದರೆ ಸ್ಪಾಟ್‌ ಫಿಕ್ಸಿಂಗ್‌ ಪ್ರಕರಣದಲ್ಲಿ ಬಂಧಿಸಲಾದ ರಾಜಸ್ಥಾನ್‌ ರಾಯಲ್ಸ್‌ ತಂಡದ ಮೂವರು ಆಟಗಾರರಾದ ಶ್ರೀಶಾಂತ್‌, ಅಜಿತ್‌ ಚಾಂಡೀಲ ಮತ್ತು ಅಂಕಿತ್‌ ಚೌವಾಣ್‌ ವಿರುದ್ಧ ದೆಹಲಿ ಪೊಲೀಸರು ಇದುವರೆಗೆ ಯಾವುದೇ ಪ್ರಕರಣ ದಾಖಲಿಸಿಕೊಂಡಿಲ್ಲ. ಇದರಿಂದ ಮೂವರು ಆಟಗಾರರಿಗೆ ಜಾಮೀನು ದೊರೆಯಲು ಸಹಾಯಕವಾಗಿತ್ತು ಎಂಬ ಮಾತುಗಳು ಕೇಳಿ ಬರತೊಡಗಿವೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments