Webdunia - Bharat's app for daily news and videos

Install App

ಹಿರಿಯರನ್ನು ಹೊರಗಿಟ್ಟದ್ದು ಸಮರ್ಥನೀಯ: ವೆಂಗ್ಸರ್ಕಾರ್

Webdunia
ಮಂಗಳವಾರ, 22 ಜನವರಿ 2008 (13:50 IST)
ಹಿರಿಯ ಆಟಗಾರರನ್ನು ಏಕದಿನ ತಂಡದಿಂದ ಕೈ ಬಿಟ್ಟದ್ದು ಆಯ್ಕೆ ಮಂಡಳಿಯ ಉತ್ತಮ ನಿರ್ಧಾರ ಎಂದು ಆಯ್ಕೆ ಮಂಡಳಿಯ ಹಿರಿಯ ಸದಸ್ಯ ದಿಲೀಪ್ ವೆಂಗ್ಸರ್ಕಾರ್ ಪುನರುಚ್ಚರಿಸಿದ್ದಾರೆ.

ಅವರು, ಹಿರಿಯ ಆಟಗಾರರನ್ನು ಕೈ ಬಿಟ್ಟಿರುವುದನ್ನು ಸಮರ್ಥಿಸುವ ಜೊತೆಗೆ, ಈಗ ಆಯ್ಕೆ ಮಾಡಲಾಗಿರುವ ಯುವ ಆಟಗಾರರನ್ನು ಸಂಪೂರ್ಣವಾಗಿ ಬೆಂಬಲಿಸಿದ್ದಾರೆ.

' ನಾವು ಭವಿಷ್ಯದ ಕಡೆಗೆ ನೋಡುತ್ತಿದ್ದೇವೆ. ಅದಕ್ಕಾಗಿ ಹಿರಿಯರನ್ನು ಕೈ ಬಿಟ್ಟಿದ್ದೇವೆ. ಆಟಗಾರನ ಎರಡು ತಿಂಗಳ ಹಿಂದಿನ ಸಾಧನೆಯನ್ನು ಪರಿಗಣಿಸಿ ತಂಡಕ್ಕೆ ಆಯ್ಕೆ ಮಾಡುವುದು ಸರಿಯಾ?' ಎಂದು ಪ್ರಶ್ನಿಸಿದ್ದಾರೆ.

' ನಾನು ಮುಂದಿನ ದಿನಗಳಲ್ಲಿ ಆಯ್ಕೆ ಮಂಡಳಿಯ ಸದಸ್ಯ ಸ್ಥಾನದಲ್ಲಿ ಇಲ್ಲದಿರಬಹುದು. ಆದರೆ ನಮ್ಮ ಗುರಿ ಭಾರತ ತಂಡವನ್ನು ಒಂದು ಉತ್ತಮ ತಂಡವಾಗಿ ರೂಪಿಸುವುದು. ಇದಕ್ಕಾಗಿಯೇ ಸದ್ಯದ ಸರಣಿಗೆ ಸಂತುಲಿತ ಆಟಗಾರರಿರುವ ತಂಡವನ್ನು ನೀಡಿದ್ದೇವೆ' ಎಂದು ಅವರು ಅಭಿಪ್ರಾಯಪಟ್ಟರು.

ಆದರೆ, ಗಂಗೂಲಿಯನ್ನು ಹೊರಗಿಟ್ಟಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರ ನೀಡಲು ವೆಂಗ್ಸರ್ಕಾರ್ ಹಿಂಜರಿದರು.

' ಪ್ರಸ್ತುತ, ಭಾರತ ತಂಡವು ಸ್ಥಾನಪಟ್ಟಿಯಲ್ಲಿ 7ನೇ ಸ್ಥಾನದಿಂದ 2 ನೇ ಸ್ಥಾನಕ್ಕೆ ಏರಿದೆ. ಇದಕ್ಕೆ ಆಯ್ಕೆ ಮಂಡಳಿಯ ಶ್ರಮವೇ ಕಾರಣ ಎಂಬುದನ್ನು ಅವರು ನೆನಪಿಸಿದರು.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

Show comments