Webdunia - Bharat's app for daily news and videos

Install App

250 ಕೋಟಿ ಹಾನಿ ಪರಿಹಾರ ನೀಡಿ: ವೆಸ್ಟ್ ಇಂಡೀಸ್ ಮಂಡಳಿಗೆ ಬಿಸಿಸಿಐ ಪತ್ರ

Webdunia
ಶನಿವಾರ, 1 ನವೆಂಬರ್ 2014 (15:58 IST)
ಭಾರತದ ಪ್ರವಾಸ ಸಂದರ್ಭದಲ್ಲಿ ಮಧ್ಯದಲ್ಲೇ ಪ್ರವಾಸ ಮೊಟಕು ಮಾಡಿದ ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ 250 ಕೋಟಿ ರೂ. ಹಾನಿ ಪರಿಹಾರ ನೀಡಬೇಕೆಂದು ಬಿಸಿಸಿಐ ಹಕ್ಕು ಪ್ರತಿಪಾದಿಸಿದೆ. ಮಂಡಳಿ 15 ದಿನಗಳೊಳಗೆ ಉತ್ತರಿಸದಿದ್ದರೆ ಕಾನೂನಿನ ಕ್ರಮವನ್ನು ಕೈಗೊಳ್ಳುವುದಾಗಿ ಬಿಸಿಸಿಐ ಬೆದರಿಕೆ ಹಾಕಿದೆ.
 
 ಐದು ಏಕದಿನ ಪಂದ್ಯಗಳು, ಒಂದು ಟ್ವೆಂಟಿ 20 ಮತ್ತು ಮೂರು ಟೆಸ್ಟ್ ಪಂದ್ಯಗಳನ್ನು ಆಡಬೇಕಿದ್ದ ವೆಸ್ಟ್ ಇಂಡೀಸ್ ತಂಡ ಧರ್ಮಶಾಲಾದಲ್ಲಿ ನಾಲ್ಕನೇ ಏಕ ದಿನ ಪೂರ್ಣಗೊಂಡ ಬಳಿಕ ಪ್ರವಾಸವನ್ನು ರದ್ದುಗೊಳಿಸಿ ಹಿಂದಿರುಗಿತ್ತು. ವೆಸ್ಟ್ ಇಂಡೀಸ್ ಆಟಗಾರರು ಮತ್ತು ವೆಸ್ಟ್ ಇಂಡೀಸ್ ಆಟಗಾರರ ಒಕ್ಕೂಟದ ನಡುವೆ ವಿವಾದ ಉದ್ಭವಿಸಿದ್ದರಿಂದ ಪ್ರವಾಸವನ್ನು ಅರ್ಧದಲ್ಲೇ ಮೊಟಕುಮಾಡಲಾಗಿತ್ತು.

ಪ್ರವಾಸವನ್ನು ಅರ್ಧದಲ್ಲೇ ಮೊಟಕು ಮಾಡಿದ್ದರಿಂದ ಬಿಸಿಸಿಐ 400 ಕೋಟಿ ರೂ. ನಷ್ಟವನ್ನು ಅನುಭವಿಸಿದೆ. ಭಾರತೀಯ ಕ್ರಿಕೆಟ್ ಮಂಡಳಿ ಡಬ್ಲ್ಯುಐಸಿಬಿ ಅಧ್ಯಕ್ಷ ಡೇವ್ ಕ್ಯಾಮರೂನ್‌ಗೆ ನಾಲ್ಕು ಪುಟಗಳ ಪತ್ರ ಬರೆದಿದ್ದು, ತಮಗುಂಟಾದ ನಷ್ಟಕ್ಕೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಕಾರ್ಯದರ್ಶಿ ಸಂಜಯ್ ಪಟೇಲ್  ತಿಳಿಸಿದ್ದಾರೆ.
 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments