Webdunia - Bharat's app for daily news and videos

Install App

ಬಿಜೆಪಿಯ "ದಾದಾ' ಆಗಲು ನಿರಾಕರಿಸಿದ ಸೌರವ್ ಗಂಗೂಲಿ

Webdunia
ಶುಕ್ರವಾರ, 23 ಜನವರಿ 2015 (15:12 IST)
ಮಾಜಿ ಕ್ರಿಕೆಟಿಗ ಸೌರವ್‌ ಗಂಗೂಲಿ ಅವರು ಬಿಜೆಪಿ ಸೇರಲಿದ್ದಾರೆ. ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧದ ಬಿಜೆಪಿ ಮುಖ "ದಾದಾ' ಆಗಲಿದ್ದಾರೆ ಎಂದು ಹಬ್ಬಿದ್ದ ವದಂತಿಗಳಿಗೆ ತೆರೆ ಬಿದ್ದಿದೆ.
 
"ಸೌರವ್‌ ಗಂಗೂಲಿ ಬಿಜೆಪಿಯನ್ನು ಸೇರುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ಪಕ್ಷಕ್ಕೆ ಭಾರೀ ಬಲ ಬರಲಿದೆ. ದಾದಾ ವರ್ಸಸ್‌ ದೀದಿ ಸ್ಪರ್ಧೆ ಏರ್ಪಡಲಿದೆ ಎಂದು ಉದ್ಯಮಿ ಹರೀಶ್‌ ಗೋಯಂಕಾ ಅವರು ಬುಧವಾರ ಸಂಜೆ ಟ್ವೀಟ್‌ ಮಾಡಿದ್ದರು. 
 
ಇದರ ಬೆನ್ನಲ್ಲೇ ತಾವು ಬಿಜೆಪಿ ಸೇರುತ್ತಿರುವುದಾಗಿ ಹಬ್ಬಿರುವ ವದಂತಿಯನ್ನು ಸ್ವತಃ ಸೌರವ್‌ ಗಂಗೂಲಿ ನಿರಾಕರಿಸಿದ್ದಾರೆ. "ಬಿಜೆಪಿಯಿಂದ ಆಫ‌ರ್‌ ಬಂದಿದ್ದು ನಿಜ. ಆದರೆ, ಅದನ್ನು ನಾನು ನಿರಾಕರಿಸಿದ್ದೇನೆ.
 
ಪಕ್ಷ ಸೇರಲ್ಲ. ಚುನಾವಣೆಗೆ ಕೂಡ ಸ್ಪರ್ಧಿಸುವುದಿಲ್ಲ' ಎಂದು ಸುದ್ದಿಗಾರರೆದುರು ಹೇಳಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಗೌರವ ಭಾವನೆ ಹೊಂದಿದ್ದಾಗಿ ಹೇಳಿದ್ದಾರೆ. ಇನ್ನು "ಉದ್ಯಮಿಯ ಟ್ವೀಟ್‌ನಲ್ಲಿ ಯಾವುದೇ ಸತ್ಯಾಂಶವಿಲ್ಲ' ಎಂದು ಬಿಜೆಪಿ ಪ.ಬಂಗಾಳ ಪ್ರಭಾರಿ ಸಿದ್ಧಾರ್ಥ ನಾಥ್‌ ಸಿಂಗ್‌ ಸ್ಪಷ್ಟಪಡಿಸಿದ್ದಾರೆ.
 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments