Webdunia - Bharat's app for daily news and videos

Install App

ತೀರ್ಪಿಗೆ ಮೇಲ್ಮನವಿ ಸಲ್ಲಿಸಬೇಕೆಂಬ ಬಿಸಿಸಿಐ ಮನವಿಗೆ ಐಸಿಸಿ ತಿರಸ್ಕಾರ

Webdunia
ಬುಧವಾರ, 6 ಆಗಸ್ಟ್ 2014 (16:23 IST)
ಇಂಗ್ಲೆಂಡ್ ಆಟಗಾರ ಜೇಮ್ಸ್ ಆಂಡರ್‌ಸನ್ ಅವರು ನಿರ್ದೋಷಿ ಎಂದು ತೀರ್ಪು ನೀಡಿದ ವಿರುದ್ಧ ಮೇಲ್ಮನವಿ ಸಲ್ಲಿಸದಿರಲು ಐಸಿಸಿ ನಿರ್ಧರಿಸಿದೆ.ಈ ಫಲಿತಾಂಶ ಎರಡು ಆಮೂಲಾಗ್ರ ಶಿಸ್ತು ಪ್ರಕ್ರಿಯೆಗಳ ಫಲವಾಗಿ ಬಂದಿದೆ.ಲಿಖಿತ ತೀರ್ಪನ್ನು ಪರಿಶೀಲಿಸಿದ ಬಳಿಕ ಐಸಿಸಿಗೆ ನಿರ್ಧಾರ ಕೈಗೊಂಡ ರೀತಿಯ ಬಗ್ಗೆ ತೃಪ್ತಿಯಾಗಿದೆ.

ಸುಮಾರು 14 ಸಾಕ್ಷಿಗಳು ಸಾಕ್ಷ್ಯ ನುಡಿದಿದ್ದು, ಗೋರ್ಡನ್ ಲೂವಿಸ್ ಅವರ ತೀರ್ಪನ್ನು ಪರಿಗಣಿಸಿ ಮತ್ತಷ್ಟು ಮೇಲ್ಮನವಿ ವಿಧಾನಗಳ ಮೂಲಕ ಪ್ರಕ್ರಿಯೆಯನ್ನು ಬೆಳೆಸುವುದರಲ್ಲಿ ಅರ್ಥವಿಲ್ಲ ಎಂದು ಬಾವಿಸಿದ್ದಾಗಿ ಐಸಿಸಿ ತಿಳಿಸಿದೆ. 
 
ಇಂಗ್ಲೆಂಡ್ ಆಟಗಾರ ಆಂಡರ್‌ಸನ್ ಅವರಿಗೆ ಕ್ಲೀನ್ ಚಿಟ್ ನೀಡಿದ ತೀರ್ಪನ್ನು ಪರಿಶೀಲಿಸುವಂತೆ ಬಿಸಿಸಿಐ ನೀಡಿದ್ದ ಮನವಿಯನ್ನು ಐಸಿಸಿ ತಿರಸ್ಕರಿಸಿದ್ದರಿಂದ ಬಿಸಿಸಿಐಗೆ ಮುಖಭಂಗವಾಗಿದೆ. ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯದ ವೇಳೆ ಆಂಡರ್‌ಸನ್ ಮತ್ತು ರವೀಂದ್ರ ಜಡೇಜಾ ನಡುವೆ ವಾಗ್ವಾದ ನಡೆದ ಸಂದರ್ಭದಲ್ಲಿ ಆಂಡರ್‌ಸನ್ ತಮ್ಮನ್ನು ಅವಾಚ್ಯವಾಗಿ ಬೈಯ್ದು ದೂಡಿದ್ದಾರೆಂದು ಜಡೇಜಾ ಆಪಾದಿಸಿದ್ದರು.

ಈ ಕುರಿತು ಇಬ್ಬರಿಗೂ ಕ್ಲೀನ್ ಚಿಟ್ ನೀಡಿ ತೀರ್ಪು ನೀಡಲಾಗಿತ್ತು. ಆದರೆ ಈಗ ತೀರ್ಪನ್ನು ಮರುಪರಿಶೀಲಿಸುವಂತೆ ಬಿಸಿಸಿಐ ಮನವಿಯನ್ನು ಐಸಿಸಿ ತಿರಸ್ಕರಿಸಿದೆ. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments