Webdunia - Bharat's app for daily news and videos

Install App

‘ದೆಹಲಿ ಪೊಲೀಸರು ನನ್ನನ್ನು ಭಯೋತ್ಪಾದಕರಂತೆ ಟ್ರೀಟ್ ಮಾಡಿದರು’

Webdunia
ಶನಿವಾರ, 4 ಫೆಬ್ರವರಿ 2017 (08:46 IST)
ಕೊಚ್ಚಿ: ಸದ್ಯ ಮ್ಯಾಚ್ ಫಿಕ್ಸಿಂಗ್ ಕಳಂಕದಿಂದ ಮುಕ್ತನಾಗಿ ಟೀಂ ಇಂಡಿಯಾಕ್ಕೆ ಬರಲು ಹವಣಿಸುತ್ತಿರುವ ಕೇರಳ ಮೂಲದ ಟೀಂ ಇಂಡಿಯಾ ಮಾಜಿ ವೇಗಿ ಎಸ್. ಶ್ರೀಶಾಂತ್ ತಮ್ಮ ಹಳೆಯ ಕರಾಳ ದಿನಗಳನ್ನು ಸ್ಮರಿಸಿಕೊಂಡಿದ್ದಾರೆ.

 
ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಅರೆಸ್ಟ್ ಆದಾಗ ತಮ್ಮನ್ನು ಪೊಲೀಸರು ನಡೆಸಿಕೊಂಡ ರೀತಿಯನ್ನು ಅವರು ವಿವರಿಸಿದ್ದಾರೆ. ‘ನಾನು ನಿಜವಾಗಿ ಆ ಸಂದರ್ಭದಲ್ಲಿ ಮದ್ಯ ಪಾನ ಮಾಡಿರಲಿಲ್ಲ. ಆದರೂ ಆ ಆರೋಪ ಹೊರಿಸಿದರು. ನನ್ನನ್ನು ಯಾಕೆ ಅರೆಸ್ಟ್ ಮಾಡುತ್ತಿದ್ದಾರೆ ಎಂಬುದನ್ನೂ ಹೇಳಲಿಲ್ಲ. ವಾರೆಂಟ್ ಇಲ್ಲದೇ ಬುಲೆಟ್ ಪ್ರೂಫ್ ವಾಹನದಲ್ಲಿ 70 ಜನ  ಕಮಾಂಡೋಗಳಿದ್ದ ಗುಂಪು ನನ್ನನ್ನು ದೆಹಲಿಗೆ ವಿಚಾರಣೆಗೆ ಕರೆದೊಯ್ದಿತು.

ಜೈಲಿನಲ್ಲಿ ಅಪರಾಧಿಗಳೊಂದಿಗೆ ಕಳೆದ 27 ದಿನಗಳು ನಿಜಕ್ಕೂ ಕರಾಳ. ನಾನು ದಾವೂದ್ ಜತೆ ಸಂಭಾಷಣೆ ನಡೆಸಿದ್ದೆ ಎಂದೆಲ್ಲಾ ಆರೋಪಿಸಲಾಗಿತ್ತು. ನನ್ನ ಫೋನ್ ನ್ನು ಅವರು ಕಿತ್ತುಕೊಂಡಿದ್ದರು. ನನಗೆ ಏನಾಗುತ್ತಿದೆ ಎಂದೇ ಗೊತ್ತಾಗುತ್ತಿರಲಿಲ್ಲ’ ಎಂದು ಶ್ರೀಶಾಂತ್ ಹೇಳಿಕೊಂಡಿದ್ದಾರೆ.

2013 ರ ಐಪಿಎಲ್ ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪರ ಆಡುತ್ತಿದ್ದ ಶ್ರೀಶಾಂತ್ ಹಾಗೂ ಇನ್ನಿಬ್ಬರು ಕ್ರಿಕೆಟಿಗರು ಮ್ಯಾಚ್ ಫಿಕ್ಸಿಂಗ್ ಆರೋಪದಲ್ಲಿ ಬಂಧಿತರಾಗಿದ್ದಲ್ಲದೆ, ಕ್ರಿಕೆಟ್ ನಿಂದ ನಿಷೇಧಕ್ಕೊಳಗಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments