Webdunia - Bharat's app for daily news and videos

Install App

‘ರಾಷ್ಟ್ರೀಯ ತಂಡಕ್ಕೆ ಮರಳಲು ಐಪಿಎಲ್ ನಲ್ಲಿ ಆಡುವುದು ಸ್ವಾರ್ಥ’

Webdunia
ಸೋಮವಾರ, 8 ಮೇ 2017 (12:29 IST)
ನವದೆಹಲಿ: ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸಲಿರುವ ಟೀಂ ಇಂಡಿಯಾದ ಆಯ್ಕೆ ಇಂದು ನಡೆಯಲಿದೆ. ಈ ಸಂದರ್ಭದಲ್ಲಿ ಟೀಂ ಇಂಡಿಯಾಕ್ಕೆ ಆಯ್ಕೆಯಾಗುವ ವಿಶ್ವಾಸವಿದೆಯೇ ಎಂದು ಕೇಳಿದ್ದಕ್ಕೆ ಗೌತಮ್ ಗಂಭೀರ್ ಈ ರೀತಿ ಹೇಳಿದ್ದಾರೆ.

 
ಐಪಿಎಲ್ ನಲ್ಲಿ ಉತ್ತಮವಾಗಿ ಆಡುವುದು ಟೀಂ ಇಂಡಿಯಾಕ್ಕೆ ಆಯ್ಕೆಯಾಗಲು ಎಂದರೆ ಸ್ವಾರ್ಥವೆನಿಸುತ್ತದೆ. ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ಐಪಿಎಲ್ ನಲ್ಲಿ ಆಡಿದ್ದ ಗೌತಮ್ 12 ಪಂದ್ಯಗಳಿಂದ 425 ರನ್ ಮಾಡಿದ್ದಾರೆ.

ಟೀಂ ಇಂಡಿಯಾದಲ್ಲಿ ಆರಂಭಿಕನ ಸ್ಥಾನ ಖಾಲಿಯಿದ್ದು, ಆ ಸ್ಥಾನಕ್ಕೆ ಗಂಭೀರ್ ಆಯ್ಕೆಯಾಗಬೇಕೆಂದು ಒತ್ತಾಯಗಳು ಕೇಳಿಬರುತ್ತಿವೆ. ಈ ಹಿನ್ನಲೆಯಲ್ಲಿ ಗಂಭೀರ್ ಸ್ಪಷ್ಟನೆ ನೀಡಿದ್ದಾರೆ.

‘ಒಂದು ವೇಳೆ ನಾನು ಚಾಂಪಿಯನ್ಸ್ ಟ್ರೋಫಿ ದೃಷ್ಟಿಯಲ್ಲಿಟ್ಟುಕೊಂಡೇ ರನ್ ಗಳಿಸಿದ್ದರೆ ಅದು ತುಂಬಾ ಸ್ವಾರ್ಥವೆನಿಸುತ್ತದೆ. ಹಾಗೆ ನೋಡಿದರೆ ಕೆಕೆಆರ್ ತಂಡದ ಎಲ್ಲಾ ಆಟಗಾರರನ್ನು ಅದೇ ರೀತಿಯಲ್ಲಿ ನೋಡಬೇಕಾಗುತ್ತದೆ. ಆದರೆ ಅದು ಹಾಗಲ್ಲ. ಇಂದಿನ ಪಂದ್ಯದಲ್ಲಿ ಚೆನ್ನಾಗಿ ಆಡುವುದಷ್ಟೇ ನಮ್ಮ ಕರ್ತವ್ಯ. ಮುಂದಿನದು ತಾನಾಗೇ ಆಗುತ್ತದೆ’ ಎಂದು ಗಂಭೀರ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments