Webdunia - Bharat's app for daily news and videos

Install App

ಜಟಾಪಟಿ ಬಳಿಕ ಮುಖಾಮುಖಿಯಾದ ಸೌರವ್- ರವಿ ಶಾಸ್ತ್ರಿ

Webdunia
ಶುಕ್ರವಾರ, 23 ಸೆಪ್ಟಂಬರ್ 2016 (16:10 IST)
ಅನಿಲ್ ಕುಂಬ್ಳೆ ಅವರನ್ನು ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ನೇಮಿಸಿದ ಬಳಿಕ ಇದೇ ಮೊದಲ ಬಾರಿಗೆ ರವಿ ಶಾಸ್ತ್ರಿ ಮತ್ತು ಸೌರವ್ ಗಂಗೂಲಿ ಒಂದೇ ಸಾರ್ವಜನಿಕ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಗುರುವಾರದಿಂದ ಪ್ರಾರಂಭವಾಗಿರುವ ಭಾರತ - ನ್ಯೂಜಿಲೆಂಡ್ ನಡುವಿನ ಟೆಸ್ಟ್ ಕ್ರಿಕೆಟ್ ಪಂದ್ಯ ಭಾರತದ ಪಾಲಿಗೆ 500ನೇ ಟೆಸ್ಟ್ ಪಂದ್ಯವಾಗಿದ್ದರಿಂದ ಬಿಸಿಸಿಐ ಆಹ್ವಾನಿಸಿದ್ದ ಕ್ರಿಕೆಟ್ ದಿಗ್ಗಜರ ಸಾಲಿನಲ್ಲಿ ಇವರು ಕೂಡ ಸೇರಿದ್ದರು. 
ಭಾರತ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರನ ಆಯ್ಕೆ ಪ್ರಕ್ರಿಯೆಯಲ್ಲಿ ಗಂಗೂಲಿ ಶಾಸ್ತ್ರಿ ಅವರನ್ನು ಅವಮಾನಿಸಿದ್ದಾರೆಂಬ ಆರೋಪ ಕೇಳಿ ಬಂದಿತ್ತು. 
 
ಕ್ರಿಕೆಟ್ ಸಲಹಾ ಸಮಿತಿ ತಮ್ಮ ಸಂದರ್ಶನ ನಡೆಸುವಾಗ ಅಲಭ್ಯರಾಗುವ ಮೂಲಕ ಗಂಗೂಲಿ ತಮಗೆ ಅಗೌರವ ತೋರಿದ್ದಾರೆಂದು ಶಾಸ್ತ್ರಿ ಆಕ್ರೋಶ ವ್ಯಕ್ತ ಪಡಿಸಿದ್ದರು. 
 
ಆದರೆ ಅವರ ಆರೋಪವನ್ನು ತಳ್ಳಿ ಹಾಕಿದ್ದ ಗಂಗೂಲಿ ತಾವು ಅಧ್ಯಕ್ಷರಾಗಿರುವ ಬಂಗಾಳ್ ಕ್ರಿಕೆಟ್ ಸಮಿತಿಯ ಅತಿ ಮಹತ್ವದ ಸಭೆಗೆ ಹಾಜರಾಗಲು ತೆರಳಿದ್ದಕ್ಕೆ ತಾವು ಗೈರು ಹಾಜರಾಗಿದ್ದಾಗಿ ಹೇಳಿದ್ದರು. ಬಳಿಕ ಸಹ ಅವರ ನಡುವೆ ವಾಕ್ಸಮರ ಮುಂದುವರೆದಿತ್ತು.
 
ಈ ಘಟನೆಯ ಬಳಿಕ ಶಾಸ್ತ್ರಿ ಸ್ವಲ್ಪ ದಿನ ಬ್ರೇಕ್ ತೆಗೆದುಕೊಂಡು ಬಳಿಕ ಬಿಸಿಸಿಐನ ಮಾಧ್ಯಮ ಪ್ರತಿನಿಧಿಯಾಗಿ ಮುಂದುವರೆದಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments