ಸುರೇಶ್ ರೈನಾ ಬಳಿಕ ಸಿಎಸ್ ಕೆಗೆ ಕೊಕ್ ಕೊಡಲು ತಯಾರಾದ ಹರ್ಭಜನ್ ಸಿಂಗ್

Webdunia
ಮಂಗಳವಾರ, 1 ಸೆಪ್ಟಂಬರ್ 2020 (11:56 IST)
ಚೆನ್ನೈ: ಈ ಬಾರಿಯ ಐಪಿಎಲ್ ಆರಂಭಕ್ಕೂ ಮೊದಲೇ ಚೆನ್ನೈ ಆಂತರಿಕ ಬಿಕ್ಕಟ್ಟಿನಿಂದ ತತ್ತರಿಸಿ ಹೋಗಿದೆ. ಒಂದೆಡೆ ಕೊರೋನಾ, ಮತ್ತೊಂದೆಡೆ ಸುರೇಶ್ ರೈನಾ ಕೂಟದಿಂದ ಹೊರಬಿದ್ದಿದ್ದು, ಸಾಲದೆಂಬಂತೆ ಈಗ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ಕೂಡಾ ಸಿಎಸ್ ಕೆ ತಂಡಕ್ಕೆ ಕೊಕ್ ಕೊಡಲು ಸಿದ್ಧರಾಗಿದ್ದಾರೆ.


ರೈನಾ ವೈಯಕ್ತಿಕ ಕಾರಣ ನೀಡಿ ಹೊರಬಂದಿದ್ದರೂ ಅವರು ತಂಡದ ಜತೆಗೆ ವೈಮನಸ್ಯ ಮಾಡಿಕೊಂಡಿದ್ದರು ಎಂಬ ಊಹಾಪೋಹಗಳು ಕೇಳಿಬರುತ್ತಿವೆ. ಈ ನಡುವೆ ಚೆನ್ನೈ ತಂಡದಲ್ಲಿ ಕೊರೋನಾ ಪ್ರಕರಣಗಳು ಪತ್ತೆಯಾಗಿರುವುದರಿಂದ ತಂಡದ ಆಟಗಾರರಿಗೆ ಇನ್ನೂ ಅಭ್ಯಾಸಕ್ಕಿಳಿಯಲು ಸಾಧ್ಯವಾಗಿಲ್ಲ. ವಿದೇಶೀ ಆಟಗಾರರು ಸಿಎಸ್ ಕೆ ತಂಡ ಕೂಡಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ.

ಈ ನಡುವೆ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ಕೂಡಾ ತಂಡವನ್ನು ಕೂಡಿಕೊಳ್ಳಲು ಹಿಂಜರಿಯುತ್ತಿದ್ದಾರೆ ಎಂಬ ಸುದ್ದಿ ಬಂದಿದೆ. ತಾಯಿಯ ಅನಾರೋಗ್ಯ ನಿಮಿತ್ತ ಚೆನ್ನೈ ತಂಡದೊಂದಿಗೆ ದುಬೈಗೆ ಪ್ರಯಾಣ ಬೆಳೆಸದ ಭಜಿ ಈಗ ಕೊರೋನಾ ಪ್ರಕರಣ ಪತ್ತೆಯಾದ ಮೇಲೆ ಆತಂಕಕ್ಕೊಳಗಾಗಿದ್ದಾರೆ. ಈ ಹಿನ್ನಲೆಯಲ್ಲಿ ಈ ಬಾರಿಯ ಐಪಿಎಲ್ ಕೂಟದಿಂದಲೇ ಹೊರಬರಲು ಚಿಂತನೆ ನಡೆಸಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments