ಲಂಡನ್: ಚಾಂಪಿಯನ್ಸ್ ಟ್ರೋಫಿ ಆಡಲು ಇಂಗ್ಲೆಂಡ್ ಗೆ ತೆರಳಿರುವ ಟೀಂ ಇಂಡಿಯಾಕ್ಕೆ ಆಘಾತದ ಮೇಲೆ ಆಘಾತವಾಗಿದೆ. ಯುವರಾಜ್ ಸಿಂಗ್ ನಂತರ ಮತ್ತೊಬ್ಬ ಬ್ಯಾಟ್ಸ್ ಮನ್ ಆಘಾತತ ನೀಡಿದ್ದಾರೆ.
ಜ್ವರದಿಂದ ಬಳಲುತ್ತಿರುವ ಯುವಿ ಇಂದು ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಅಭ್ಯಾಸ ಪಂದ್ಯ ತಪ್ಪಿಸಿಕೊಳ್ಳಲಿದ್ದಾರೆ. ಅವರ ಬೆನ್ನಲ್ಲೇ ರೋಹಿತ್ ಶರ್ಮಾ ಇನ್ನೂ ಇಂಗ್ಲೆಂಡ್ ತಲುಪದೇ ಇರುವುದರಿಂದ ಇಂದು ಕಣಕ್ಕಿಳಿಯುತ್ತಿಲ್ಲ.
ಚಾಂಪಿಯನ್ಸ್ ಟ್ರೋಫಿಗೆ ಮೊದಲು ಭಾರತ ತಂಡಕ್ಕೆ ಸಾಮರ್ಥ್ಯ ಒರೆಗೆ ಹಚ್ಚಿಕೊಳ್ಳಲು ಇದು ಸೂಕ್ತ ವೇದಿಕೆಯಾಗಿತ್ತು. ಆದರೆ ಇವರಿಬ್ಬರು ಬಾಂಗ್ಲಾದೇಶದ ವಿರುದ್ಧ ಮಂಗಳವಾರ ನಡೆಯಲಿರುವ ಅಭ್ಯಾಸ ಪಂದ್ಯಕ್ಕೆ ಲಭ್ಯರಿರಲಿದ್ದಾರೆ ಎಂದು ಬಿಸಿಸಿಐ ಪ್ರಕಟಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ