Webdunia - Bharat's app for daily news and videos

Install App

ಕ್ಯಾಪ್ಟನ್ ಧೋನಿಗೆ ಕಣ್ಣೀರಿನ ವಿದಾಯ ಹೇಳಿದ ಅಂಬಟಿ ರಾಯ್ಡು

Webdunia
ಗುರುವಾರ, 12 ಜನವರಿ 2017 (11:32 IST)
ಮುಂಬೈ: ಅಭ್ಯಾಸ ಪಂದ್ಯದಲ್ಲಿ ಶತಕ ಸಿಡಿಸಿದ ಮೇಲೆ ಕೊನೆಯ ಬಾರಿಗೆ ನಾಯಕತ್ವ ವಹಿಸಿದ್ದ ಧೋನಿಗೆ ಬ್ಯಾಟಿಂಗ್ ಬಿಟ್ಟುಕೊಟ್ಟ ಕ್ರಿಕೆಟಿಗ ಅಂಬಟಿ ರಾಯ್ಡು ಪಂದ್ಯದ ನಂತರ ಕ್ಯಾಪ್ಟನ್ ನೆನೆದು ಕಣ್ಣೀರಾದರು.


ಪಂದ್ಯದ ನಂತರ ಮಾತನಾಡಿದ ರಾಯ್ಡು “ಇದು ತುಂಬಾ ಭಾವನಾತ್ಮಕ ಸನ್ನಿವೇಶ. ಭಾರತ ಕಂಡ ಅತ್ಯಂತ ಶ್ರೇಷ್ಠ ನಾಯಕ ಅವರು. ಅವರು ಜೀವಂತ ದಂತಕತೆ. ಈಗಲೂ ಅವರು ಅಷ್ಟೇ ಶಾಂತ ಮೂರ್ತಿ. ನನಗೆ ಅಳುವೇ ಬರುತ್ತಿದೆ. ಅವರು ಯಾವತ್ತೂ ಯುವ ಆಟಗಾರರಿಗೆ ಸಹಾಯ ಮಾಡುತ್ತಿದ್ದರು” ಎಂದು ಕಣ್ಣೀರು ಹಾಕುತ್ತಾ ರಾಯ್ಡು ನಾಯಕನ ಗುಣಗಾನ ಮಾಡಿದರು.

ಹೀಗೆ ಹೇಳುವಾಗ ಅವರ ಕಣ್ಣಲ್ಲಿ ನೀರಿನ ಪೊರೆ ಇತ್ತು. ಅಲ್ಲದೆ ಅವರು ನಾಯಕನಾಗಿದ್ದ ಕೊನೆಯ ಪಂದ್ಯದಲ್ಲಿ ಶತಕ ಭಾರಿಸಿದ್ದಕ್ಕೆ ನನಗೆ ತುಂಬಾ ಖುಷಿಯಾಗಿದೆ ಎಂದು ರಾಯ್ಡು ಹೇಳಿಕೊಂಡಿದ್ದಾರೆ. ತಮ್ಮಂತಹವರ ಕ್ರಿಕೆಟ್ ಜೀವನ ಬೆಳೆಯಲು ಧೋನಿಯೇ ಕಾರಣ ಎಂದೂ ಅವರು ಈ ಸಂದರ್ಭದಲ್ಲಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಪಂದ್ಯ ನಿಂತ್ರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಿರಾಕಲ್‌ಗೆ ಕೊಹ್ಲಿ ಅಭಿಮಾನಿಗಳು ಫುಲ್ ಖುಷ್‌, Video Viral

Bengaluru Rain: ಇಂದಿನ KKR vs RCB ಪಂದ್ಯಾಟದ ಟಿಕೆಟ್ ಖರೀದಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments