ಅನಿಲ್ ಕುಂಬ್ಳೆ ಕನ್ನಡ ಕವನ ವಾಚನಕ್ಕೆ ಫಿದಾ ಆದ ಕನ್ನಡಿಗರು

Webdunia
ಶನಿವಾರ, 16 ನವೆಂಬರ್ 2019 (08:39 IST)
ಬೆಂಗಳೂರು: ಸ್ಪಿನ್ ಮೋಡಿಗಾರ ಅನಿಲ್ ಕುಂಬ್ಳೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಷ್ಟೇ ಹೆಸರು ಮಾಡಿದ್ದರೂ ಇಂದಿಗೂ ತಮ್ಮ ಭಾಷೆ, ನೆಲ ಮರೆತಿಲ್ಲ. ಅದನ್ನು ಅವರು ಕವನ ವಾಚನ ಸವಾಲು ಸ್ವೀಕರಿಸುವ ಮೂಲಕ ಸಾಬೀತುಪಡಿಸಿದ್ದಾರೆ.


ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿರುವ ಕವನ ವಾಚನ ಅಭಿಯಾನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅನಿಲ್ ಕುಂಬ್ಳೆಗೆ ಕವನ ವಾಚನದ ಸವಾಲೊಡ್ಡಿದ್ದರು. ಅದನ್ನು ಸ್ವೀಕರಿಸಿರುವ ಅಪ್ಪಟ ಕನ್ನಡ ಪ್ರತಿಭೆ ಕುಂಬ್ಳೆ ರಾಷ್ಟ್ರಕವಿ ಕುವೆಂಪು ಅವರ ಎಲ್ಲಾದರೂ ಇರು ಎಂತಾದರೂ ಇರು ಎಂಬ ಕನ್ನಡ ಕವನ ವಾಚನ ಮಾಡಿದ್ದಾರೆ.

ಅಷ್ಟೇ ಅಲ್ಲ ತಾವು ಕವನ ವಾಚನ ಮಾಡಿದ ಮೇಲೆ ಕಿಚ್ಚ ಸುದೀಪ್, ಪುನೀತ್ ರಾಜ್ ಕುಮಾರ್ ಮತ್ತು ಗಾಯಕ ವಿಜಯ್ ಪ್ರಕಾಶ್ ಗೆ ಈ ಚಾಲೆಂಜ್ ವರ್ಗಾಯಿಸಿದ್ದಾರೆ. ಅದರಲ್ಲೂ ವಿಜಯ್ ಪ್ರಕಾಶ್ ಹಾಡಿನ ಮೂಲಕವೇ ಕವನ ಹೇಳಬೇಕು ಎಂದು ಷರತ್ತು ಹಾಕಿದ್ದಾರೆ.

ಅನಿಲ್ ಕುಂಬ್ಳೆ ಕನ್ನಡ ಕವನ ವಾಚನ ಮಾಡಿರುವ ವಿಡಿಯೋ ನೋಡಿರುವ ಅಭಿಮಾನಿಗಳು ನೀವು ನಮ್ಮ ಕನ್ನಡದ ಹೆಮ್ಮೆ ಸರ್. ಎಷ್ಟೇ ಖ್ಯಾತಿ ಬಂದರೂ ಇಂದಿಗೂ ಕನ್ನಡ ಮರೆತಿಲ್ವಲ್ಲಾ ಎಂದು ಅಭಿನಂದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಇಂದಿನಿಂದ ಟಿ20 ಸರಣಿ, ಅದೊಂದು ದಾಖಲೆಯಾಗದಿದ್ರೆ ಸಾಕಪ್ಪಾ..

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments