Webdunia - Bharat's app for daily news and videos

Install App

ಆರ್‌ಸಿಬಿ ವಿರುದ್ದದ ಗೆಲುವಿನ ನಂತರ ಸ್ಕ್ಯಾನ್‌ಗೊಳಗಾದ ವೆಂಕಟೇಶ್ ಅಯ್ಯರ್

Sampriya
ಶನಿವಾರ, 30 ಮಾರ್ಚ್ 2024 (16:11 IST)
Photo Courtesy X
ಬೆಂಗಳೂರು: ಇಲ್ಲಿನ ಕಂಠೀರವ ಸ್ಡೇಡಿಯಂನಲ್ಲಿ ನಡೆದ ಬೆಂಗಳೂರು ರಾಯಲ್ ಚಾಲೆಂಜರ್ಸ್‌ ವಿರುದ್ಧ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್‌ 7 ವಿಕೆಟ್‌ಗಳೊಂದಿಗೆ ರೋಚಕ ಜಯವನ್ನು ಸಾಧಿಸಿತು.

ಇನ್ನೂ ಕೆಕೆಆರ್‌ ಪರ ವೆಂಕಟೇಶ್ ಅಯ್ಯರ್ ಅಮೋಘ ಬ್ಯಾಟಿಂಗ್ ಮಾಡಿ ಅರ್ಧಶತಕವನ್ನು ಗಳಿಸುವ ಮೂಲಕ ತಂಡದ ಗೆಲುವಿಗೆ ಕಾರಣರಾದರು. ಇನ್ನೂ ಆಟದ ಮಧ್ಯಭಾಗದಲ್ಲಿ ವೆಂಕಟೇಶ್ ಅಯ್ಯರ್ ಅವರು ತೀವ್ರವಾದ ಬೆನ್ನಿನ ನೋವನ್ನು ಅನುಭವಿಸಿದರು. ಈ ವೇಳೆ ವೈದ್ಯರಿಂದ ತಪಾಸಣೆಗೂ ಒಳಗಾದರು.

ಈ ಬಗ್ಗೆ ಗೆಲುವಿನ ನಂತರ ಮಾತನಾಡಿದ ವೆಂಕಟೇಶ್ ಅಯ್ಯರ್ ಅವರು ತಮ್ಮ ಬೆನ್ನಿನ ಗಾಯದ ಬಗ್ಗೆ ಹೇಳಿಕೊಂಡರು. ನನ್ನ ಬೆನ್ನಿನ ಆರೋಗ್ಯದ ಬಗ್ಗೆ ಸ್ಕ್ಯಾನ್ ಮಾಡಬೇಕಾಗಿದೆ ಎಂದು ಬಹಿರಂಗಪಡಿಸಿದರು. ಇದು ಸ್ವಲ್ಪ ಜಾಕ್ ಆಗಿದೆ, ಹೋಗಿ ಸ್ಕ್ಯಾನ್ ಮಾಡಬೇಕಾಗಿದೆ ಎಂದು ಹೇಳಿಕೊಂಡರು.

ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 182 ರನ್‌ಗಳ ಗುರಿಯನ್ನು ಕೆಕೆಆರ್‌ಗೆ ನೀಡಿತು.  183 ರನ್‌ಗಳ ಗುರಿ ಬೆನ್ನತ್ತಿದ ಕೆಕೆಆರ್ ಆರಂಭಿಕರಾದ ಫಿಲ್ ಸಾಲ್ಟ್ (30) ಮತ್ತು ಸುನಿಲ್ ನರೈನ್ (47) ಅವರ ಉತ್ತಮ ಆರಂಭವನ್ನು ತಂದುಕೊಟ್ಟರು.

ಇನ್ನೂ ವೆಂಕಟೇಶ್ ಅಯ್ಯರ್ 30 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳೊಂದಿಗೆ 50 ರನ್ ಗಳಿಸಿದರು. ಇದೇ ವೇಳೆ ಕೆಕೆಆರ್ ಪರ ಶ್ರೇಯಸ್ ಅಯ್ಯರ್ (39*) ಮತ್ತು ರಿಂಕು ಸಿಂಗ್ (5*) ಮೊತ್ತದೊಂದಿಗೆ ರೋಚಕ ಜಯ ಸಾಧಿಸಿತು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments