Webdunia - Bharat's app for daily news and videos

Install App

ಯುವರಾಜ್ ಸಿಂಗ್ ಗೆ ನಿರ್ಗಮನದ ಹಾದಿ ತೋರಿಸಿತೇ ಬಿಸಿಸಿಐ

Webdunia
ಮಂಗಳವಾರ, 15 ಆಗಸ್ಟ್ 2017 (07:25 IST)
ಮುಂಬೈ: ಹೊಸ ನೀರು ಬಂದಾಗ ಹಳೆ ನೀರು ಬೆಲೆ ಕಳೆದುಕೊಳ್ಳುತ್ತದೆ ಎನ್ನುವುದಕ್ಕೆ ಯುವರಾಜ್ ಸಿಂಗ್ ಲೇಟೆಸ್ಟ್ ಉದಾಹರಣೆ. ಹಲವು ವರ್ಷಗಳಿಂದ ಭಾರತ ತಂಡವನ್ನು ಪ್ರತಿನಿಧಿಸುತ್ತಿರುವ ಯುವಿ ಜಾಗವನ್ನು ತುಂಬುವಂತಹ ಯುವ ಪ್ರತಿಭೆಗಳ ಗಡಣವೇ ನಮ್ಮಲ್ಲಿದೆ.

 
ಹೀಗಾಗಿ ನೀವು ಇದ್ದರಷ್ಟೇ ತಂಡ ಎನ್ನುವ ಪರಿಸ್ಥಿತಿಯಲ್ಲಿ ತಂಡವಿಲ್ಲ. ನಿಮ್ಮ ದಾರಿಯನ್ನು ನೀವು ನೋಡಿಕೊಳ್ಳಬಹುದು ಎಂದು ಆಯ್ಕೆಗಾರರು ಪರೋಕ್ಷವಾಗಿ ಯುವಿಗೆ ಸೂಚಿಸಿದ್ದಾರೆ.

ಶ್ರೀಲಂಕಾ ವಿರುದ್ಧ ಸರಣಿಗೆ ಅವರನ್ನು ಆಯ್ಕೆ ಮಾಡದೇ ಇರುವುದಕ್ಕೆ ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಭವಿಷ್ಯದ ತಂಡವನ್ನು ಕಟ್ಟುವ ನಿಟ್ಟಿನಲ್ಲಿ ಇದು ಅನಿವಾರ್ಯ. ಆದರೆ ಧೋನಿಗೆ ಇಷ್ಟು ಬೇಗ ಯುವಿಯದ್ದೇ ಹಾದಿ ತೋರುವಷ್ಟು ಧೈರ್ಯ ಆಯ್ಕೆಗಾರರಿಗೆ ಬಂದಿಲ್ಲ.

ಧೋನಿಯಷ್ಟು ಸಮರ್ಥ ವಿಕೆಟ್ ಕೀಪರ್ ನನ್ನು ಟೀಂ ಇಂಡಿಯಾ ಇನ್ನೂ ಹುಟ್ಟು ಹಾಕಿಲ್ಲ. ಎಲ್ಲದಕ್ಕಿಂತ ಹೆಚ್ಚಾಗಿ ನಾಯಕ ಕೊಹ್ಲಿ ಇನ್ನೂ ಕ್ಯಾಪ್ಟನ್ ಆಗಿ ಮಾಗಬೇಕಿದೆ. ಹೀಗಾಗಿ ಅವರಿಗೆ ಮಾರ್ಗದರ್ಶನ ತೋರಲಾದರೂ ಧೋನಿ ಅಗತ್ಯ ತಂಡಕ್ಕಿದೆ. ಹಾಗಾಗಿ ಅವರ ವಿಚಾರದಲ್ಲಿ ಅಷ್ಟೊಂದು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೆ ಮುಂದೆ ನೋಡುತ್ತಿದೆ.

ಯಾವುದೇ ತಂಡವಾದರೂ, ಗೆದ್ದೆತ್ತಿಗೆ ಮಾತ್ರ ಬೆಲೆ. ವೈಫಲ್ಯಗಳನ್ನು ಸಹಿಸಿಕೊಂಡು, ಮತ್ತಷ್ಟು ಅವಕಾಶ ಮಾಡಿಕೊಡುತ್ತಾ ಕೂರುವಷ್ಟು ವ್ಯವಧಾನ ನಮಗಿಲ್ಲ. ಹಾಗಾಗಿಯೇ ಕಳೆದ 17 ವರ್ಷಗಳ ಯುವಿ ಬದುಕಿಗೆ ಫುಲ್ ಸ್ಟಾಪ್ ಇಡುವ ಕಾಲ ಹತ್ತಿರ ಬಂದಿದೆ ಎಂದು ಆಯ್ಕೆಗಾರರು ಪರೋಕ್ಷವಾಗಿ ಸೂಚಿಸಿದ್ದಾರೆ.

ಇದನ್ನೂ ಓದಿ.. ಟೀಂ ಇಂಡಿಯಾ ಬಿಟ್ಟು ಕೌಂಟಿ ಕಡೆಗೆ ಓಡಿದ ರವಿಚಂದ್ರನ್ ಅಶ್ವಿನ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

ಮುಂದಿನ ಸುದ್ದಿ
Show comments