Webdunia - Bharat's app for daily news and videos

Install App

ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಗೆ ಬಿಸಿಸಿಐ ನೀಡಿದ ಶೋಕಾಸ್ ನೋಟಿಸ್ ಗೆ ಹಾಕಿದ ಸಹಿಯೇ ಈಗ ವಿವಾದದಲ್ಲಿ!

Webdunia
ಗುರುವಾರ, 10 ಜನವರಿ 2019 (10:19 IST)
ಮುಂಬೈ: ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋನಲ್ಲಿ ಮಹಿಳೆಯರ ಬಗ್ಗೆ ಅಸಭ್ಯವಾಗಿ ಕಾಮೆಂಟ್ ಮಾಡಿದ್ದಕ್ಕೆ ಬಿಸಿಸಿಐ ಟೀಂ ಇಂಡಿಯಾ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಗೆ ಶೋಕಾಸ್ ನೋಟಿಸ್ ನೋಡಿತ್ತು.


ಆದರೆ ಆ ನೋಟಿಸ್ ಗೆ ಹಾಕಲಾದ ಸಹಿ ಬಗ್ಗೆಯೇ ಈಗ ವಿವಾದ ಹುಟ್ಟಿಕೊಂಡಿದೆ. ಈ ಶೋಕಾಸ್ ನೋಟಿಸ್ ಗೆ ಸಹಿ ಹಾಕಿದ್ದು ಬಿಸಿಸಿಐ ಸಿಇಒ ರಾಹುಲ್ ಜೋಹ್ರಿ. ವಿಪರ್ಯಾಸವೆಂದರೆ ಇದೇ ಜೋಹ್ರಿ ಲೈಂಗಿಕ ಕಿರುಕುಳ ಆರೋಪದಲ್ಲಿ ತನಿಖಾ ಸಮಿತಿಯೆದುರು ವಿಚಾರಣೆ ಎದುರಿಸುತ್ತಿದ್ದಾರೆ.

ಹೀಗಾಗಿ ಕ್ರಿಕೆಟಿಗರಿಗೆ ನೀಡಿದ ನೋಟಿಸ್ ಗೆ ಜೋಹ್ರಿ ಸಹಿ ಹಾಕಿದ್ದು ಎಷ್ಟು ಸರಿ ಎಂಬ ವಿಚಾರದ ಬಗ್ಗೆ ಬಿಸಿಸಿಐ ಒಳಗೇ ಗುದ್ದಾಟ ಶುರುವಾಗಿದೆ. ‘ಇದು ವಸಾಹತುಶಾಹಿ ದೊರೆ ಮೊಹಮ್ಮದ್ ಘಜನಿಗೆ ಶಾಂತಿ ನಿಯೋಗದ ಅಧ್ಯಕ್ಷ ಸ್ಥಾನ ನೀಡಿದಂತೆ’ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಆಂಗ್ಲ ವಾಹಿನಿಯೊಂದರಲ್ಲಿ ಲೇವಡಿ ಮಾಡಿದ್ದಾರೆ.

ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿರುವ ವ್ಯಕ್ತಿ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗರಿಗೆ ನೀಡಲಾದ ನೋಟಿಸ್ ಗೆ ಸಹಿ ಹಾಕುವ ಅರ್ಹತೆ ಹೇಗೆ ಪಡೆದುಕೊಂಡರು ಎಂಬುದು ಬಿಸಿಸಿಐ ಒಳಗೇ ಚರ್ಚೆಗೆ ಗ್ರಾಸವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ