ದ್ವಿತೀಯ ಟೆಸ್ಟ್ ಗೆ ಭುವನೇಶ್ವರ್ ಕುಮಾರ್ ಹೊರಗಿಟ್ಟು ಇಶಾಂತ್ ಶರ್ಮಾಗೆ ಮಣೆ ಹಾಕಿದ್ದು ಯಾಕೆ ಗೊತ್ತಾ?

Webdunia
ಶನಿವಾರ, 13 ಜನವರಿ 2018 (13:40 IST)
ಜೊಹಾನ್ಸ್ ಬರ್ಗ್: ದ.ಆಫ್ರಿಕಾ ಮತ್ತು ಭಾರತ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಅತಿಥೇಯರು ಮೊದಲು ಬ್ಯಾಟಿಂಗ್ ಆರಂಭಿಸಿದ್ದಾರೆ. ಆದರೆ ಭಾರತ ತಂಡದಲ್ಲಿ ಅಚ್ಚರಿಯೆಂಬಂತೆ ಕಳೆದ ಪಂದ್ಯದ ಹೀರೋ ಭುವನೇಶ್ವರ್ ಕುಮಾರ್ ರನ್ನು ಹೊರಗಿಡಲಾಗಿದೆ.
 

ಭುವನೇಶ್ವರ್ ಕುಮಾರ್ ರನ್ನು ಹೊರಗಿಟ್ಟು ಹಿರಿಯ ವೇಗಿ ಇಶಾಂತ್ ಶರ್ಮಾಗೆ ಮಣೆ ಹಾಕಲಾಗಿದೆ. ಇದಕ್ಕೆ ಕಾರಣ ಈ ಪಿಚ್ ನಲ್ಲಿರುವ ಬೌನ್ಸ್. ಇಶಾಂತ್ ನೀಳಕಾಯದವರಾಗಿರುವುದರಿಂದ ಅವರ ಬಾಲ್ ನಲ್ಲಿ ಬೌನ್ಸ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಕೊಹ್ಲಿ  ಭುವನೇಶ್ವರ್ ರನ್ನು ಹೊರಗಿಡುವ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ.

ಇನ್ನೊಂದೆಡೆ ಕೆಎಲ್ ರಾಹುಲ್ ತಂಡಕ್ಕೆ ಬಂದಿರುವುದು ಕನ್ನಡಿಗರಿಗೆ ಸಂತಸ ಮೂಡಿಸಿದೆ. ಶಿಖರ್ ಧವನ್ ಸ್ಥಾನಕ್ಕೆ ರಾಹುಲ್ ಆಗಮನವಾಗಿದೆ. ವೃದ್ಧಿಮಾನ್ ಸಹಾ ಜಾಗದಲ್ಲಿ ವಿಕೆಟ್ ಕೀಪರ್ ಆಗಿ ಹಿರಿಯ ವಿಕೆಟ್ ಕೀಪರ್ ಪಾರ್ಥಿವ್ ಪಟೇಲ್ ಗೆ ಅವಕಾಶ ನೀಡಲಾಗಿದೆ. ಈ ಬದಲಾವಣೆ ಎಷ್ಟು ಕ್ಲಿಕ್ ಆಗುತ್ತದೆ ಎಂದು ಸಮಯ ಕಳೆದಂತೆ ತಿಳಿದು ಬರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಥೇಟ್ ತಂದೆಗೆ ತಕ್ಕ ಮಗ.. ಸಮಿತ್ ದ್ರಾವಿಡ್ ರ ಒಂದೊಂದು ಶಾಟ್ ನೋಡ್ತಿದ್ರೆ ನಿಮಗೆ ರಾಹುಲ್ ದ್ರಾವಿಡ್ ನೆನಪಾಗೇ ಆಗ್ತಾರೆ Video

ನೀವು ಅವಕಾಶ ಕೊಡದೇ ಇದ್ರೆ ಏನಂತೆ, ನಮಗೆ ವೈಭವ್ ಸೂರ್ಯವಂಶಿ ಸೂಪರ್ ಸ್ಟಾರ್ ಎಂದ ಫ್ಯಾನ್ಸ್ Video

IND vs ENG: ಏನೋ ಮಾಡ್ತಿದ್ದೀಯಾ ಇಶಾನ್... ಮೈದಾನದಲ್ಲೇ ಕಿತ್ತಾಡಿದ ಅಭಿಷೇಕ್ ಶರ್ಮಾ Video

ENG VS IND T20: ಈ ಬಾರಿಯಾದರೂ ವೈಭವ್ ಸೂರ್ಯವಂಶಿ ಆಟ ನೋಡಬೇಕೆಂದು ಕಾದಿದ್ದವರಿಗೆ ಇಂದು ನಿರಾಸೆ

ಜಗನ್ನಾಥನ ಮೂರ್ತಿ ಗಿಫ್ಟ್ ಪಡೆಯುವಾಗ ಹಾರ್ದಿಕ್ ಪಾಂಡ್ಯ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಮುಂದಿನ ಸುದ್ದಿ
Show comments