Webdunia - Bharat's app for daily news and videos

Install App

ಬ್ರೇಕಿಂಗ್!! ಧೋನಿ ನಾಯಕತ್ವ ತ್ಯಜಿಸುವಂತೆ ಸೂಚಿಸಿದ್ದು ಬಿಸಿಸಿಐ?!

Webdunia
ಸೋಮವಾರ, 9 ಜನವರಿ 2017 (10:30 IST)
ಮುಂಬೈ: ಭಾರತ ಸೀಮಿತ ಓವರ್ ಗಳ ನಾಯಕ ಧೋನಿ ನಾಯಕತ್ವ ತ್ಯಜಿಸಿದ್ದು ಎಲ್ಲೆಡೆ ಸುದ್ದಿಯಾಗಿದ್ದು, ಕೊಹ್ಲಿಗಾಗಿ ಅವರೇ ಸ್ಥಾನ ಬಿಟ್ಟುಕೊಟ್ಟರು ಎಂಬ ಮಾತುಗಳು ಕೇಳಿಬರುತ್ತಿತ್ತು. ಆದರೆ ಇದೀಗ ಬಂದ ವರದಿಯನ್ನು ನಂಬುವುದಾದರೆ, ಸ್ವತಃ ಬಿಸಿಸಿಐ ಧೋನಿಗೆ ನಾಯಕತ್ವಕ್ಕೆ ರಾಜೀನಾಮೆ ನೀಡಲು ಸೂಚಿಸಿತ್ತಂತೆ!


ಇದಕ್ಕೆ ಕಳೆದ ವರ್ಷ ಸೆಪ್ಟೆಂಬರ್ ನಲ್ಲೇ ವೇದಿಕೆ ಸಿದ್ಧವಾಗಿತ್ತಂತೆ. ಮೊನ್ನೆ ನಡೆದ ಜಾರ್ಖಂಡ್ ರಣಜಿ ಸೆಮಿಫೈನಲ್ ನಲ್ಲಿ ಇದು ಸಮಾಪ್ತಿಯಾಯಿತು ಎನ್ನಲಾಗಿದೆ. 2019 ರ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಹೊಸದಾಗಿ ನೇಮಕವಾದ ಎಂಎಸ್ ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ಹೊಸ ತಂಡವನ್ನು ಕಟ್ಟಲು ರೆಡಿಯಾಗುತ್ತಿತ್ತು.

ಇತ್ತೀಚೆಗೆ ಕೊಹ್ಲಿ ಜನಪ್ರಿಯತೆ ಹೆಚ್ಚಿದ ಹಿನ್ನಲೆಯಲ್ಲಿ ಮತ್ತು ಮುಂಬರುವ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ರಣಜಿ ಪಂದ್ಯದ ನಡುವೆ ಆಯ್ಕೆ ಸಮಿತಿ ಅಧ್ಯಕ್ಷ ಪ್ರಸಾದ್ ಧೋನಿಯೊಂದಿಗೆ ಮಾತುಕತೆ ನಡೆಸಿದರು. ಆಗ ಯಾಕೆ ಕೊಹ್ಲಿಯನ್ನೇ ಎಲ್ಲಾ ಮಾದರಿಗೂ ನಾಯಕನಾಗಿ ಮಾಡಬೇಕು ಎಂದು ಮನವರಿಕೆ ಮಾಡಿಕೊಟ್ಟರು. ನಂತರ ಧೋನಿ ರಾಜೀನಾಮೆ ನೀಡಲು ಸೂಚಿಸಿದರು ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಇದು ಎಷ್ಟು ಸತ್ಯ, ಸುಳ್ಳು ಎಂದು ಗೊತ್ತಿಲ್ಲ. ಆದರೆ ಧೋನಿ ಇತ್ತೀಚೆಗಷ್ಟೇ 2019 ರವರೆಗೆ ಮುಂದುವರಿಯಲು ಬಯಸಿರುವುದಾಗಿ ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಹಾಗಾಗಿ ಬಿಸಿಸಿಐ ಪರೋಕ್ಷವಾಗಿ ಧೋನಿಯನ್ನು ಕೆಳಗಿಳಿಸುವುದಕ್ಕೆ ಕಾರಣವಾಯಿತು ಎನ್ನಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments