Webdunia - Bharat's app for daily news and videos

Install App

ಚೆನ್ನೈ ಸೂಪರ್‌ ಕಿಂಗ್ಸ್‌ ನಾಯಕತ್ವದಿಂದ ಕೆಳಗಿಳಿದ ಧೋನಿ: ನೂತನ ನಾಯಕನಾಗಿ ಋತುರಾಜ್ ಗಾಯಕ್ವಾಡ್

Sampriya
ಗುರುವಾರ, 21 ಮಾರ್ಚ್ 2024 (16:48 IST)
Photo Courtesy X
ಬೆಂಗಳೂರು:  ಚೆನ್ನೈ ಸೂಪರ್‌ ಕಿಂಗ್ಸ್‌ ನಾಯಕತ್ವದಿಂದ  ದಿಗ್ಗಜ ಆಟಗಾರ ಎಂಎಸ್‌ ಧೋನಿ ಅವರು ಹೊರನಡೆದಿದ್ದಾರೆ.

ಅಚ್ಚರಿ ಎಂಬಂತೆ ನೂತನ ನಾಯಕನಾಗಿ ಋತುರಾಜ್ ಗಾಯಕ್ವಾಡ್ ಸಿಎಸ್‌ಕೆ ತಂಡದ ಹೊಣೆ ಹೊತ್ತಿದ್ದಾರೆ. ಈ ಕುರಿತು ಐಪಿಎಲ್‌ ಹಾಗೂ ಸಿಎಸ್‌ಕೆ ಫ್ರಾಂಚೈಸ್ ಖಚಿತಪಡಿಸಿದೆ. ಧೋನಿ ತಮ್ಮ ನಾಯಕತ್ವವನ್ನು ಗಾಯಕ್ವಾಡ್‌ಗೆ ಹಸ್ತಾಂತರಿಸಿದ್ದಾರೆ ಎಂದು ಫ್ರಾಂಚೈಸ್‌ ಟ್ಟೀಟ್‌ ಮಾಡಿದೆ.

ಇನ್ನೂ ಆಟಗಾರ ರುತುರಾಜ್ 2019 ರಿಂದ ಚೆನ್ನೈ ಸೂಪರ್ ಕಿಂಗ್ಸ್‌ನ ಅವಿಭಾಜ್ಯ ಅಂಗವಾಗಿದ್ದಾರೆ. ಈ ಅವಧಿಯಲ್ಲಿ ಐಪಿಎಲ್‌ನಲ್ಲಿ 52 ಪಂದ್ಯಗಳನ್ನು ಆಡಿದ್ದಾರೆ. ಇದೀಗ ಇವರ ನಾಯಕತ್ವದಲ್ಲಿ 2024ರ ಐಪಿಎಲ್ ಪಂದ್ಯಾಟವನ್ನು ಚೆನ್ನೈ ಸೂಪರ್‌ ಕಿಂಗ್ಸ್‌ ಎದುರಿಸಲಿದೆ.

ಭಾರತ ಕಂಡ ಶ್ರೇಷ್ಠ ನಾಯಕ ಹಾಗೂ ವಿಕೆಟ್‌ ಕೀಪರ್‌ ಆಗಿರುವ ಎಂಎಸ್‌ ಧೋನಿ, 2008ರಲ್ಲಿ ಐಪಿಎಲ್‌ ಆರಂಭವಾದಾಗಿನಿಂದಲೂ ಸೂಪರ್ ಕಿಂಗ್ಸ್ ತಂಡದ ನಾಯಕನಾಗಿ ಮುನ್ನಡೆಸುತ್ತಿದ್ದಾರೆ. 42 ವರ್ಷದ ಮಾಹಿ ಪ್ರತಿ ಆವೃತ್ತಿಯಲ್ಲಿಯೂ ನಾಯಕನಾಗಿ ತಂಡವನ್ನು ಮುನ್ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments