ರಿಷಬ್ ಪಂತ್ ಗಾಗಿ ಧೋನಿಯನ್ನೇ ಬೆಂಚ್ ಕಾಯಿಸ್ತಾರಾ ವಿರಾಟ್ ಕೊಹ್ಲಿ?!

Webdunia
ಮಂಗಳವಾರ, 27 ಜೂನ್ 2017 (10:49 IST)
ಆಂಟಿಗುವಾ: ವೆಸ್ಟ್ ಇಂಡೀಸ್ ವಿರುದ್ಧ ಮೂರನೇ ಏಕದಿನ ಪಂದ್ಯದಲ್ಲಿ ಮಹತ್ವದ ಬದಲಾವಣೆ ಮಾಡುವ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಸೂಚನೆ ನೀಡಿದ್ದಾರೆ.

 
ಅವಕಾಶಕ್ಕಾಗಿ ಹಾತೊರೆಯುತ್ತಿರುವ ಯುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ರನ್ನು ಆಡಿಸುವ ಸುಳಿವನ್ನು ಕೊಹ್ಲಿ ನೀಡಿದ್ದಾರೆ. ಹಾಗಾದರೆ ಧೋನಿಗೆ ರೆಸ್ಟ್ ನೀಡುತ್ತಾರಾ ಎನ್ನುವ ಪ್ರಶ್ನೆಯೇಳುತ್ತದೆ.

‘ಕೆಲವು ಹುಡುಗರಿಗೆ ಇನ್ನೂ ಅವಕಾಶ ಸಿಕ್ಕಿಲ್ಲ. ಹಾಗಾಗಿ ಅವರಿಗೆ ಅವಕಾಶ ನೀಡುವ ಕುರಿತು ಸಮಾಲೋಚನೆ ನಡೆಸಲಿದ್ದೇವೆ. ಓಪನರ್ ಆಗಿ ಅಜಿಂಕ್ಯಾ ಉತ್ತಮ ಕೆಲಸ ಮಾಡಿದ್ದಾರೆ. ಇದೀಗ ಇನ್ನೂ ಹೆಚ್ಚಿನ ಪ್ರಯೋಗ ನಡೆಸಲು ಚಿಂತನೆ ನಡೆಸಿದ್ದೇವೆ’ ಎಂದು ಕೊಹ್ಲಿ ಹೇಳಿದ್ದಾರೆ.

ಈ ಮೂಲಕ ಪರ್ಯಾಯ ಆಟಗಾರರಿಗೆ ಅವಕಾಶ ನೀಡಿ ಭವಿಷ್ಯದ ತಂಡ ಕಟ್ಟಲು ಪ್ರಯತ್ನಿಸಲಿದ್ದಾರೆ. ರಿಷಬ್ ಪಂತ್ ರಂತಹ ಹೊಡೆ ಬಡಿಯ ಆಟಗಾರರಿಗೆ ಇನ್ನೂ ಟೀಂ ಇಂಡಿಯಾದಲ್ಲಿ ಅವಕಾಶ ಸಿಕ್ಕಿಲ್ಲ. ಅವರನ್ನು ಭವಿಷ್ಯದ ಧೋನಿಯೆಂದೇ ಪರಿಗಣಿಸಲಾಗುತ್ತಿದೆ. ಅಲ್ಲದೆ, ಧೋನಿ ಕೂಡಾ ರಿಷಬ್ ಗೆ ಆಗಾಗ ಸಲಹೆ ಸೂಚನೆ ನೀಡುತ್ತಿರುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

ಮುಂದಿನ ಸುದ್ದಿ
Show comments