ಮನೀಶ್ ಪಾಂಡೆ ಜಾಗಕ್ಕೆ ದಿನೇಶ್ ಕಾರ್ತಿಕ್ ರನ್ನು ಆಯ್ಕೆ ಮಾಡಿದ್ದ್ಕಕೆ ಆಕ್ರೋಶ

Webdunia
ಶುಕ್ರವಾರ, 19 ಮೇ 2017 (10:06 IST)
ಮುಂಬೈ: ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾ ಆಯ್ಕೆ ನಡೆದಾಗಲೇ ಸಾಕಷ್ಟು ಟೀಕೆಗಳು ವ್ಯಕ್ತವಾಗಿತ್ತು. ಅನುಭವಿ ಗಂಭೀರ್, ಉತ್ಸಾಹಿ ರಿಷಬ್ ಪಂತ್ ಗೆ ಕೈಕೊಟ್ಟಿದ್ದಕ್ಕೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

 
ಅದೀಗ ಹೆಚ್ಚಾಗಿದೆ. ಕನ್ನಡಿಗ ಮನೀಶ್ ಪಾಂಡೆ ಗಾಯಗೊಂಡು ತೆರವಾದ ಸ್ಥಾನಕ್ಕೆ ದಿನೇಶ್ ಕಾರ್ತಿಕ್ ಗೆ ಸ್ಥಾನ ನೀಡಿದ್ದಕ್ಕೆ ಟ್ವಿಟರ್ ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಐಪಿಎಲ್ ನಲ್ಲಿ ಅಷ್ಟೆಲ್ಲಾ ಯಶಸ್ಸು ಸಾಧಿಸಿರುವ ಗೌತಮ್ ಗಂಭೀರ್ ಅಥವಾ ರಿಷಬ್ ಪಂತ್ ರನ್ನು ಆರಿಸುವುದು ಬಿಟ್ಟು, ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಕಾರ್ತಿಕ್ ಗೆ ಯಾಕೆ ಸ್ಥಾನ ಕೊಟ್ಟರು ಎಂದು ಅಭಿಮಾನಿಗಳು ಕೇಳುತ್ತಿದ್ದಾರೆ.

15 ಸದಸ್ಯರ ತಂಡವಲ್ಲದೆ, 5 ಆಟಗಾರರನ್ನು ಮೀಸಲು ಆಟಗಾರರಾಗಿ ಬಿಸಿಸಿಐ  ಹೆಸರಿಸಿತ್ತು. ಅವರಲ್ಲಿ ದಿನೇಶ್ ಕಾರ್ತಿಕ್ ಅಲ್ಲದೆ ಸುರೇಶ್ ರೈನಾ, ರಿಷಬ್ ಪಂತ್ ರಂತಹ ಬ್ಯಾಟ್ಸ್ ಮನ್ ಗಳಿದ್ದರು. ಅವರನ್ನೆಲ್ಲಾ ಬಿಟ್ಟು ದಿನೇಶ್ ಗೆ ಪ್ರಾಶಸ್ತ್ಯ ನೀಡಿದ್ದಕ್ಕೆ ಟ್ವಿಟರಿಗರು ತಪರಾಕಿ ನೀಡುತ್ತಿದ್ದಾರೆ.

ಆದರೆ ಕಾರ್ತಿಕ್ ಕೂಡಾ ಸಾಮಾನ್ಯ ಆಟಗಾರರಲ್ಲ. ಈ ಐಪಿಎಲ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿದವರ ಪೈಕಿ ಎರಡನೇ ಸ್ಥಾನದಲ್ಲಿದ್ದಾರೆ. ಅಲ್ಲದೆ ದೇಶೀಯ ಕ್ರಿಕೆಟ್ ನಲ್ಲೂ ಹೆಚ್ಚು ರನ್ ಗಳಿಸಿದ್ದಾರೆ ಎಂದು ಬಿಸಿಸಿಐ ಸಮರ್ಥಿಸಿಕೊಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

India vs Zimbabwe 2nd T20I: ಟಾಸ್‌ ಗೆದ್ದ ಜಿಂಬಾಬ್ವೆ, ಬೌಲಿಂಗ್ ಆಯ್ಕೆ

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಮುಂದಿನ ಸುದ್ದಿ
Show comments