Webdunia - Bharat's app for daily news and videos

Install App

ಮನೀಶ್ ಪಾಂಡೆ ಜಾಗಕ್ಕೆ ದಿನೇಶ್ ಕಾರ್ತಿಕ್ ರನ್ನು ಆಯ್ಕೆ ಮಾಡಿದ್ದ್ಕಕೆ ಆಕ್ರೋಶ

Webdunia
ಶುಕ್ರವಾರ, 19 ಮೇ 2017 (10:06 IST)
ಮುಂಬೈ: ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾ ಆಯ್ಕೆ ನಡೆದಾಗಲೇ ಸಾಕಷ್ಟು ಟೀಕೆಗಳು ವ್ಯಕ್ತವಾಗಿತ್ತು. ಅನುಭವಿ ಗಂಭೀರ್, ಉತ್ಸಾಹಿ ರಿಷಬ್ ಪಂತ್ ಗೆ ಕೈಕೊಟ್ಟಿದ್ದಕ್ಕೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

 
ಅದೀಗ ಹೆಚ್ಚಾಗಿದೆ. ಕನ್ನಡಿಗ ಮನೀಶ್ ಪಾಂಡೆ ಗಾಯಗೊಂಡು ತೆರವಾದ ಸ್ಥಾನಕ್ಕೆ ದಿನೇಶ್ ಕಾರ್ತಿಕ್ ಗೆ ಸ್ಥಾನ ನೀಡಿದ್ದಕ್ಕೆ ಟ್ವಿಟರ್ ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಐಪಿಎಲ್ ನಲ್ಲಿ ಅಷ್ಟೆಲ್ಲಾ ಯಶಸ್ಸು ಸಾಧಿಸಿರುವ ಗೌತಮ್ ಗಂಭೀರ್ ಅಥವಾ ರಿಷಬ್ ಪಂತ್ ರನ್ನು ಆರಿಸುವುದು ಬಿಟ್ಟು, ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಕಾರ್ತಿಕ್ ಗೆ ಯಾಕೆ ಸ್ಥಾನ ಕೊಟ್ಟರು ಎಂದು ಅಭಿಮಾನಿಗಳು ಕೇಳುತ್ತಿದ್ದಾರೆ.

15 ಸದಸ್ಯರ ತಂಡವಲ್ಲದೆ, 5 ಆಟಗಾರರನ್ನು ಮೀಸಲು ಆಟಗಾರರಾಗಿ ಬಿಸಿಸಿಐ  ಹೆಸರಿಸಿತ್ತು. ಅವರಲ್ಲಿ ದಿನೇಶ್ ಕಾರ್ತಿಕ್ ಅಲ್ಲದೆ ಸುರೇಶ್ ರೈನಾ, ರಿಷಬ್ ಪಂತ್ ರಂತಹ ಬ್ಯಾಟ್ಸ್ ಮನ್ ಗಳಿದ್ದರು. ಅವರನ್ನೆಲ್ಲಾ ಬಿಟ್ಟು ದಿನೇಶ್ ಗೆ ಪ್ರಾಶಸ್ತ್ಯ ನೀಡಿದ್ದಕ್ಕೆ ಟ್ವಿಟರಿಗರು ತಪರಾಕಿ ನೀಡುತ್ತಿದ್ದಾರೆ.

ಆದರೆ ಕಾರ್ತಿಕ್ ಕೂಡಾ ಸಾಮಾನ್ಯ ಆಟಗಾರರಲ್ಲ. ಈ ಐಪಿಎಲ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿದವರ ಪೈಕಿ ಎರಡನೇ ಸ್ಥಾನದಲ್ಲಿದ್ದಾರೆ. ಅಲ್ಲದೆ ದೇಶೀಯ ಕ್ರಿಕೆಟ್ ನಲ್ಲೂ ಹೆಚ್ಚು ರನ್ ಗಳಿಸಿದ್ದಾರೆ ಎಂದು ಬಿಸಿಸಿಐ ಸಮರ್ಥಿಸಿಕೊಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments