Webdunia - Bharat's app for daily news and videos

Install App

ಗುವಾಹಟಿ ಪಿಚ್ ಮೇಲೆ ವಿರಾಟ್ ಕೊಹ್ಲಿ ರಂಗೋಲಿ ಹಾಕಿದ್ರಂತೆ!

Webdunia
ಸೋಮವಾರ, 6 ಜನವರಿ 2020 (10:13 IST)
ಗುವಾಹಟಿ: ಶ್ರೀಲಂಕಾ ವಿರುದ್ಧ ಮೊದಲ ಟಿ20 ಪಂದ್ಯ ಮಳೆ ಮತ್ತು ಮೈದಾನದ ಅವ್ಯವಸ್ಥೆಯಿಂದಾಗಿ ರದ್ದಾದ ಬಳಿಕ ಅಭಿಮಾನಿಗಳ ಆಕ್ರೋಶ ಮೇರೆ ಮೀರಿದೆ. ಸಾಮಾಜಿಕ ಜಾಲತಾಣದಲ್ಲಿ ಮಳೆ ಸಂದರ್ಭದಲ್ಲಿ ಪಿಚ್ ಸರಿಯಾಗಿ ಕಾಪಾಡಿಕೊಳ್ಳದ ಕಾರಣಕ್ಕೆ ಅಭಿಮಾನಿಗಳು ಇನ್ನಿಲ್ಲದಂತೆ ಟ್ರೋಲ್ ಮಾಡುತ್ತಿದ್ದಾರೆ.


ಮಳೆಯಾಗುವಾಗ ಪಿಚ್ ಗೆ ಸರಿಯಾದ ಕವರ್ ಹಾಕದೇ ಮೈದಾನ ಸಂಪೂರ್ಣ ಒದ್ದೆಯಾಗಿತ್ತು. ಅದೂ ಸಾಲದೆಂಬಂತೆ ಮಳೆ ನಿಂತ ಮೇಲೆ ಪಿಚ್ ಒಣಗಿಸಲು ಇಸ್ತ್ರಿ ಬಾಕ್ಸ್, ವಾಕ್ಯೂಮ್ ಕ್ಲೀನರ್ ಬಳಸಿದ್ದು ಇನ್ನಷ್ಟು ಟೀಕೆಗೆ ಗುರಿಯಾಗಿತ್ತು. ಈ ನಡುವೆ ಒದ್ದೆ ಪಿಚ್ ನ್ನು ಕೈಯಿಂದ ಕುಟ್ಟಿ ವಿರಾಟ್ ಪರಿಶೀಲನೆ ಮಾಡಿದ್ದನ್ನೇ ಅಭಿಮಾನಿಗಳು ನಾನಾ ರೀತಿಯಲ್ಲಿ ಮೆಮೆ ಮೂಲಕ ಟ್ರೋಲ್ ಮಾಡುತ್ತಿದ್ದಾರೆ.

ಒಬ್ಬರಂತೂ ವಿರಾಟ್ ಒದ್ದೆ ಪಿಚ್ ಮೇಲೆ ರಂಗೋಲಿ ಹಾಕುತ್ತಿರುವಂತೆ ಫೋಟೋ ಎಡಿಟ್ ಮಾಡಿ ಟ್ರೋಲ್ ಮಾಡಿದ್ದಾರೆ. ಮಾಜಿ ಕ್ರಿಕೆಟಿಗರು, ಕಾಮೆಂಟೇಟರ್ ಗಳೂ ಮೈದಾನದ ಅವ್ಯವಸ್ಥೆ ಬಗ್ಗೆ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದು, ಒಂದು ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆ ಆಯೋಜಿಸುವಾಗ ಯಾವ ರೀತಿ ವ್ಯವಸ್ಥೆ ಮಾಡಬೇಕೆಂದು ಗೊತ್ತಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments