ವಿರಾಟ್ ಕೊಹ್ಲಿ ಮೇಲಿನ ರೋಹಿತ್ ಶರ್ಮಾ ಅಸಮಾಧಾನಕ್ಕೆ ಕೆಎಲ್ ರಾಹುಲ್ ಬಲಿಯಾದರೇ?!

Webdunia
ಶುಕ್ರವಾರ, 21 ಸೆಪ್ಟಂಬರ್ 2018 (07:24 IST)
ದುಬೈ: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಇದುವರೆಗೆ ಆಡಿದ ಎರಡೂ ಪಂದ್ಯಗಳಲ್ಲಿ ಕೆಎಲ್ ರಾಹುಲ್ ಗೆ ಅವಕಾಶ ನೀಡಿದ ನಾಯಕ ರೋಹಿತ್ ಶರ್ಮಾ ಮೇಲೆ ಅಭಿಮಾನಿಗಳು ಸಿಟ್ಟಾಗಿದ್ದಾರೆ.

ಟೆಸ್ಟ್ ತಂಡದಲ್ಲಿ ತಮಗೆ ಸ್ಥಾನ ಸಿಗದಂತಾಗಲು ವಿರಾಟ್ ಕೊಹ್ಲಿ ಕಾರಣ ಎಂದು ಅಸಮಾಧಾನಗೊಂಡಿರುವ ರೋಹಿತ್ ಶರ್ಮಾ ಅದನ್ನು ಕೊಹ್ಲಿ ಮೆಚ್ಚಿನ ಆಟಗಾರ ಕೆಎಲ್ ರಾಹುಲ್ ಮೇಲೆ ತೀರಿಸಿಕೊಂಡರಾ ಎಂದು ಅಭಿಮಾನಿಯೊಬ್ಬರು ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಕೆಲವರು ದಿನೇಶ್ ಕಾರ್ತಿಕ್ ಬದಲು ರಾಹುಲ್ ಗೆ ಅವಕಾಶ ನೀಡಬಹುದಿತ್ತಲ್ಲವೇ ಎಂದು ಪ್ರಶ್ನಿಸಿದ್ದಾರೆ. ಮತ್ತೊಬ್ಬರು ಹಾಗೆ ನೋಡಿದರೆ ರೋಹಿತ್ ಶರ್ಮಾಗಿಂತಲೂ ರಾಹುಲ್ ಏಕದಿನ ಪಂದ್ಯಗಳಲ್ಲಿ ಹೆಚ್ಚು ಕ್ಷಮತೆ ಹೊಂದಿದ್ದಾರೆ. ಅವರನ್ನೇ ಪಾಕಿಸ್ತಾನದಂತಹ ಮಹತ್ವದ ಪಂದ್ಯಕ್ಕೆ ಹೊರಗಿಟ್ಟಿರುವುದರ ಹಿಂದಿನ ಲಾಜಿಕ್ ಏನು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಭಿಮಾನಿಗಳು ಮಾತ್ರವಲ್ಲ, ಮಾಜಿ ನಾಯಕ ಸೌರವ್ ಗಂಗೂಲಿ ಕೂಡಾ ದಿನೇಶ್ ಕಾರ್ತಿಕ್ ಬದಲಿಗೆ ರಾಹುಲ್ ಗೆ ಅವಕಾಶ ನೀಡಬೇಕಿತ್ತು ಎಂದು ಪ್ರತಿಪಾದಿಸಿದ್ದಾರೆ. ಹಾಂಗ್ ಕಾಂಗ್ ವಿರುದ್ಧ ರಾಹುಲ್ ಗೆ ಪಾಕ್ ವಿರುದ್ಧ ಆಡಲು ವಿಶ್ರಾಂತಿ ನೀಡಿರಬಹುದು ಎಂದೇ ಎಲ್ಲರೂ ಲೆಕ್ಕಾಚಾರ ಹಾಕಿದ್ದರು. ಆದರೆ ಪಾಕ್ ಪಂದ್ಯಕ್ಕೂ ರಾಹುಲ್ ರನ್ನು ಆಯ್ಕೆ ಮಾಡದೇ ಇರುವುದು ಅಭಿಮಾನಿಗಳ ಅಚ್ಚರಿಗೆ ಕಾರಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

IND vs SA 2nd Test: ಹರಿಣ ಪಡೆಯ ಬಾಲಂಗೋಚಿಗಳ ಆಟಕ್ಕೆ ಸುಸ್ತಾದ ಭಾರತದ ಬೌಲರ್‌ಗಳು

ಸ್ಮೃತಿ ಮಂಧಾನ ಮದುವೆ ದಿಡೀರ್ ಮುಂದೂಡಿಕೆ: ಕಾರಣ ಶಾಕಿಂಗ್

Australian Open: ದೀರ್ಘ ಕಾಯುವಿಕೆಯ ಬಳಿಕ ಕೊನೆಗೂ ಕಿರೀಟ ಗೆದ್ದ ಲಕ್ಷ್ಯ ಸೇನ್

ಮುಂದಿನ ಸುದ್ದಿ
Show comments