Webdunia - Bharat's app for daily news and videos

Install App

ಸಚಿನ್ ಬಳಿಕ ಗಂಗೂಲಿಗೂ ಧೋನಿ ಮೇಲೆ ಅಸಮಾಧಾನ

Webdunia
ಸೋಮವಾರ, 1 ಜುಲೈ 2019 (10:43 IST)
ಲಂಡನ್: ಅಫ್ಘಾನಿಸ್ತಾನದ ವಿರುದ್ಧ ಧೋನಿ ಮತ್ತು ಕೇದಾರ್ ಜಾಧವ್ ನಿಧಾನಗತಿಯ ಬ್ಯಾಟಿಂಗ್ ಬಗ್ಗೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅಸಮಾಧಾನ ವ್ಯಕ್ತಪಡಿಸಿದಾಗ ಎಲ್ಲರೂ ಸಚಿನ್ ರನ್ನೇ ದೂಷಿಸಿದ್ದರು.


ಆದರೆ ಇದೀಗ ನಿನ್ನೆ ನಡೆದ ಇಂಗ್ಲೆಂಡ್ ಪಂದ್ಯದಲ್ಲಿಯೂ ಈ ಇಬ್ಬರ ಆಟ ನೋಡಿ ಈಗ ಮಾಜಿ ನಾಯಕ ಸೌರವ್ ಗಂಗೂಲಿ, ಇಂಗ್ಲೆಂಡ್ ಮಾಜಿ ನಾಯಕ ನಾಸಿರ್ ಹುಸೇನ್ ಕೂಡಾ ಅಸಮಾಧಾನಗೊಂಡಿದ್ದಾರೆ.

ಧೋನಿ ಮತ್ತು ಕೇದಾರ್ ಜಾಧವ್ ಬ್ಯಾಟಿಂಗ್ ನಲ್ಲಿ ಸಕಾರಾತ್ಮಕ ಮನೋಭಾವ ತೋರಲಿಲ್ಲ ಎಂದು ಸಚಿನ್ ಆಪಾದಿಸಿದ್ದರು. ಆದರೆ ಆಗ ಧೋನಿ ಅಭಿಮಾನಿಗಳು ಟ್ವಿಟರ್ ನಲ್ಲಿ ಸಚಿನ್ ವಿರುದ್ಧ ಸಿಡಿದೆದ್ದಿದ್ದರು. ಆದರೆ ನಿನ್ನೆಯ ಪಂದ್ಯದಲ್ಲಿಯೂ ಇಬ್ಬರು ಆಟಗಾರರ ನಿಧಾನಗತಿಯ ಆಟ ನೋಡಿ ಗಂಗೂಲಿ ಕೂಡಾ ಇದಕ್ಕೆ ಏನು ಹೇಳಬೇಕೋ ನನಗೆ ಗೊತ್ತಾಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಕಾಮೆಂಟರಿ ಮಾಡುತ್ತಿದ್ದ ನಾಸಿರ್ ಹುಸೇನ್ ಕೂಡಾ ಧೋನಿ ಬ್ಯಾಟಿಂಗ್ ಬಗ್ಗೆ ಅಸಮ್ಮತಿ ಸೂಚಿಸಿದ್ದಾರೆ.

ಹೀಗಾಗಿ ಈಗ ಧೋನಿ ತಮ್ಮ ಬ್ಯಾಟಿಂಗ್ ಶೈಲಿಯನ್ನು ಬದಲಾಯಿಸಬೇಕಾದ ಅಗತ್ಯ ಬಂದಿದೆ. ಈ ಬಾರಿ ನಾಯಕ ಕೊಹ್ಲಿ ಕೂಡಾ ಇದನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದಾರೆ. ಮುಂದಿನ ಪಂದ್ಯಗಳಲ್ಲಿ ಗೆಲ್ಲಬೇಕಾದರೆ ಧೋನಿ ಸೇರಿದಂತೆ ಕೆಳ ಕ್ರಮಾಂಕದ ಬ್ಯಾಟ್ಸ್ ಮನ್ ಗಳು ಕ್ಷಿಪ್ರವಾಗಿ ರನ್ ಗಳಿಸುವುದನ್ನು ಕಲಿಯಲೇಬೇಕಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಮುಂದಿನ ಸುದ್ದಿ
Show comments