Select Your Language

Notifications

webdunia
webdunia
webdunia
webdunia

ರಾಜಕಾರಣಕ್ಕೆ ವಿದಾಯ ಹೇಳಿದ ಗೌತಮ್‌ ಗಂಭೀರ್‌

 ಗೌತಮ್‌ ಗಂಭೀರ್‌

geetha

ನವದೆಹಲಿ , ಶನಿವಾರ, 2 ಮಾರ್ಚ್ 2024 (18:23 IST)
ನವದೆಹಲಿ :ತಮ್ಮನ್ನು ಪಕ್ಷದ ಹೊಣೆಗಾರಿಕೆಯಿಂದ ಮುಕ್ತರನ್ನಾಗಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ  ಅವರಲ್ಲಿ ಮನವಿ ಮಾಡಿಕೊಂಡಿರುವ ಗೌತಮ್‌ ಗಂಭೀರ್‌ , ಮುಂದಿನ ದಿನಗಳಲ್ಲಿ ಕ್ರಿಕೆಟ್‌  ನಲ್ಲಿ ತಮ್ಮ ಭವಿಷ್ಯ ಕಂಡುಕೊಳ್ಳುವುದಾಗಿ ನುಡಿದಿದ್ದಾರೆ.ಬಿಜೆಪಿ  ಸಂಸದ ಮತ್ತು ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌  ರಾಜಕೀಯ ಸನ್ಯಾಸ ಸ್ವೀಕರಿಸಿದ್ದಾರೆ. 

ಬಿಜೆಪಿಯಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಿದ  ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್‌ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ  ಗೌತಮ್‌ ಗಂಭೀರ್‌ ಧನ್ಯವಾದ ತಿಳಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್‌  ಖಾತೆಯಲ್ಲಿ ಸಂದೇಶ ಹಂಚಿಕೊಳ್ಳುವ ಮೂಲಕ ತಮ್ಮ ರಾಜಕೀಯ ಸನ್ಯಾಸವನ್ನು ಖಚಿತಪಡಿಸಿದ್ದಾರೆ. ಬಿಜೆಪಿ ತನ್ನ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ. 
 
ಸಧ್ಯಕ್ಕೆ ಕೋಲ್ಕತ್ತಾ ನೈಟ್‌ ರೈಡರ್ಸ್‌ ಐಪಿಎಲ್‌ ತಂಡದ ಮೆಂಟರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಗೌತಮ್‌ ಗಂಭೀರ್‌ 2019 ರಲ್ಲಿ ದೆಹಲಿ ಉತ್ತರ ಕ್ಷೇತ್ರದಿಂದ ಭರ್ಜರಿ ಜಯ ಸಾಧಿಸಿದ್ದರು. 
 

Share this Story:

Follow Webdunia kannada

ಮುಂದಿನ ಸುದ್ದಿ

IND vs ENG: ಪತ್ನಿಗಾಗಿ ಟೆಸ್ಟ್ ಕೈ ಬಿಟ್ಟಿದ್ದಕ್ಕೆ ವಿರಾಟ್ ಕೊಹ್ಲಿಗೆ ಶೇಮ್ ಎಂದ ಜೇಮ್ಸ್ ಆಂಡರ್ಸನ್