ಡೆಲ್ಲಿ ವಾಯುಮಾಲಿನ್ಯ ಸರಿಹೋಗುತ್ತದೆ ಎಂದಾದರೆ ಜಿಲೇಬಿ ತಿನ್ನುವುದನ್ನು ಬಿಡ್ತಾರಂತೆ ಗೌತಮ್ ಗಂಭೀರ್!

Webdunia
ಮಂಗಳವಾರ, 19 ನವೆಂಬರ್ 2019 (09:18 IST)
ನವದೆಹಲಿ: ದೆಹಲಿಯಲ್ಲಿ ವಾಯುಮಾಲಿನ್ಯ ಮೇರೆ ಮೀರಿರುವಾಗ ಇಲ್ಲಿನ ಸಂಸದ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಜಿಲೇಬಿ ಸೇವಿಸುವ ಫೋಟೋ ಹಾಕಿದ್ದಕ್ಕೆ ಟ್ರೋಲ್ ಗೊಳಗಾಗಿದ್ದರು.


ದೆಹಲಿಯಲ್ಲಿ ವಾಯು ಮಾಲಿನ್ಯ ತಡೆಗೆ ಸಿಎಂ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯುತ್ತಿರಬೇಕಾದರೆ ಇಂಧೋರ್ ನಲ್ಲಿ ಭಾರತ ಮತ್ತು ಬಾಂಗ್ಲಾ ನಡುವಿನ ಟೆಸ್ಟ್ ಪಂದ್ಯದ ವೇಳೆ ವಿವಿಎಸ್ ಲಕ್ಷ್ಮಣ್ ಜತೆಗೆ ಗಂಭೀರ್ ಜಿಲೇಬಿ ಸೇವಿಸುವ ಫೋಟೋ ಪ್ರಕಟಿಸಿದ್ದರು. ಇದರಿಂದ ಅವರನ್ನು ಟ್ರೋಲ್ ಮಾಡಲಾಗಿತ್ತು. ಈ ಬಗ್ಗೆ ಅವರೀಗ ಪ್ರತಿಕ್ರಿಯಿಸಿದ್ದಾರೆ.

‘ಒಂದು ವೇಳೆ ನಾನು ಜಿಲೇಬಿ ಸೇವಿಸುವುದು ಬಿಟ್ಟರೆ ದೆಹಲಿಯಲ್ಲಿ ವಾಯುಮಾಲಿನ್ಯ ಕಡಿಮೆಯಾಗುತ್ತದೆ ಎಂದಾದರೆ ಜಿಲೇಬಿ ಬಿಡಲೂ ಸಿದ್ಧ. ನಾನು ಈ ಫೋಟೋ ಪ್ರಕಟಿಸಿದ ಹತ್ತೇ ನಿಮಿಷದಲ್ಲಿ ಟ್ರೋಲ್ ಮಾಡಲು ನಿಮ್ಮೆಲ್ಲಾ ಸಾಮರ್ಥ್ಯ ಬಳಸುತ್ತೀರಿ ಎಂದಾದರೆ, ಅದೇ ಸಾಮರ್ಥ್ಯವನ್ನು ವಾಯು ಮಾಲಿನ್ಯ ತಡೆಗೆ ಕೈಗೊಂಡರೂ ಸಾಕು. ದೆಹಲಿ ವಾಯ ಮಾಲಿನ್ಯ ಮುಕ್ತವಾಗುತ್ತಿತ್ತು’ ಎಂದು ಗಂಭೀರ್ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಲಾಶ್ ಜತೆಗಿನ ಮದುವೆ ರದ್ದು ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಸ್ಮೃತಿ ಮಂಧಾನ

ವಿರಾಟ್ ಕೊಹ್ಲಿ ಒಂದು ವಿಜಯ್ ಹಜಾರೆ ಟ್ರೋಫಿ ಆಡಿದರೆ ಸಿಗುವ ಸಂಭಾವನೆ ಎಷ್ಟು ಗೊತ್ತಾ

ಶುಭಮನ್ ಗಿಲ್ ಗಾಗಿ ಸಂಜು ಸ್ಯಾಮ್ಸನ್ ಸೈಡ್ ಲೈನ್ ಮಾಡಿದ್ರಾ: ನೆಟ್ಟಿಗರ ತರಾಟೆ

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

ಮುಂದಿನ ಸುದ್ದಿ
Show comments