ಕಾಶ್ಮೀರ ವಿವಾದ ಕೆಣಕಿದ ಶಾಹಿದ್ ಅಫ್ರಿದಿಗೆ ತಿರುಗೇಟು ಕೊಟ್ಟ ಗೌತಮ್ ಗಂಭೀರ್

Webdunia
ಸೋಮವಾರ, 18 ಮೇ 2020 (09:09 IST)
ನವದೆಹಲಿ: ಪಾಕಿಸ್ತಾನ ಕ್ರಿಕೆಟಿಗ ಶಾಹಿದ್ ಅಫ್ರಿದಿ ಮತ್ತೆ ಕಾಶ್ಮೀರ ವಿಚಾರದಲ್ಲಿ ಭಾರತೀಯ ಪ್ರಧಾನಿ ನರೇಂದ್ರ ಮೋದಿಯನ್ನು ಕೆಣಕುವ ಪ್ರಯತ್ನ ನಡೆಸಿದ್ದು, ಇದಕ್ಕೆ ಗೌತಮ್ ಗಂಭೀರ್ ತಕ್ಕ ತಿರುಗೇಟು ಕೊಟ್ಟಿದ್ದಾರೆ.


ಕೊರೋನಾದಿಂದ ಸಂಕಷ್ಟಕ್ಕೀಡಾದವರಿಗೆ ನೆರವಾಗಲು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಬಂದಿದ್ದ ಅಫ್ರಿದಿ ‘ನಾನು ಜಗತ್ತಿನ ಸುಂದರ ಗ್ರಾಮಕ್ಕೆ ಬಂದಿದ್ದೇನೆ. ಹಲವು ದಿನಗಳಿಂದ ಇಲ್ಲಿಗೆ ಬರಬೇಕೆಂದುಕೊಂಡಿದ್ದೆ. ಜಗತ್ತೇ ಈಗ ಮಹಾಮಾರಿ ಸೋಂಕಿಗೆ ತುತ್ತಾಗಿದೆ. ಆದರೆ ಅದಕ್ಕಿಂತ ದೊಡ್ಡ ರೋಗ ಮೋದಿ ಮನಸ್ಸಿನಲ್ಲಿದೆ’ ಎಂದು ವಿವಾದಾತ್ಮಕವಾಗಿ ಅಫ್ರಿದಿ ಹೇಳಿಕೆ ನೀಡಿದ್ದರು.

ಇದಕ್ಕೆ ಟ್ವಿಟರ್ ಮೂಲಕ ತಿರುಗೇಟು ಕೊಟ್ಟಿರುವ ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ‘ಪಾಕಿಸ್ತಾನದ ಬಳಿ 7 ಲಕ್ಷ ಸೇನೆ, 20 ಕೋಟಿ ಜನರ ಬೆಂಬಲವಿದೆ ಎಂದು 16 ವರ್ಷದ ಶಾಹಿದ್ ಅಫ್ರಿದಿ ಹೇಳುತ್ತೇ ಇದ್ದಾರೆ. ಹಾಗಿದ್ದರೂ ಕಳೆದ 70 ವರ್ಷಗಳಿಂದ ಕಾಶ್ಮೀರಕ್ಕಾಗಿ ಭಿಕ್ಷೆ ಬೇಡುತ್ತಲೇ ಇದ್ದಾರೆ. ಅಫ್ರಿದಿ, ಇಮ್ರಾನ್ ಮತ್ತು ಬಜ್ವಾನಂತಹ ಜೋಕರ್ ಗಳು ಭಾರತ ಮತ್ತು ಪ್ರಧಾನಿ ಮೋದಿ ಬಗ್ಗೆ ಮಾತಿನಲ್ಲಿ ಪೌರುಷ ಮೆರೆಯಲು ಸಾಧ‍್ಯವಷ್ಟೇ. ಆದರೆ ಅವರಿಗೆ ಕಾಶ್ಮೀರ ಯಾವತ್ತೂ ಸಿಗದು. ಬಾಂಗ್ಲಾದೇಶ ನೆನಪಿಲ್ವಾ?’ ಎಂದಿದ್ದಾರೆ. ಅಷ್ಟೇ ಅಲ್ಲದೆ ಈ ಟ್ವೀಟ್ ನ್ನು ಪ್ರಧಾನಿ ಮೋದಿಗೂ ಟ್ಯಾಗ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

ಮುಂದಿನ ಸುದ್ದಿ
Show comments