Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಆಯ್ತು, ಇದೀಗ ಧೋನಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾದ ಗೌತಮ್ ಗಂಭೀರ್ ಹೇಳಿಕೆ

Webdunia
ಭಾನುವಾರ, 31 ಮಾರ್ಚ್ 2019 (09:00 IST)
ನವದೆಹಲಿ: ಮೊನ್ನೆಯಷ್ಟೇ ವಿರಾಟ್ ಕೊಹ್ಲಿ ಆರ್ ಸಿಬಿ ನಾಯಕರಾಗಲು ಲಾಯಕ್ಕಲ್ಲ ಎಂದು ಹೇಳಿ ವಿವಾದ ಸೃಷ್ಟಿಸಿದ್ದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಇದೀಗ ಧೋನಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

 
ರಾಜಸ್ಥಾನ್ ರಾಯಲ್ಸ್ ತಂಡದ ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದನ್ನು ನೋಡಿ ಗಂಭೀರ್ ಅವರನ್ನು ಭಾರತ ಕಂಡ ಅತ್ಯಂತ ಶ್ರೇಷ್ಠ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಎಂದು ಹೊಗಳಿದ್ದಾರೆ.

ಗಂಭೀರ್ ಗೆ ತಾನು ಟೀಂ ಇಂಡಿಯಾದಲ್ಲಿ ಕಡೆಗಣಿಸಲ್ಪಟ್ಟಿದ್ದಕ್ಕೆ ಧೋನಿಯೇ ಕಾರಣ ಎಂಬ ಸಿಟ್ಟಿದೆ. ಅದಕ್ಕೇ ಆಗಾಗ ಧೋನಿಗೆ ಟಾಂಗ್ ಕೊಡುತ್ತಾರೆ. ಈಗ ಸಂಜು ಸ್ಯಾಮ್ಸನ್ ನ್ನು ಹೊಗಳಿ ಪರೋಕ್ಷವಾಗಿ ಧೋನಿಗೆ ಟಾಂಗ್ ಕೊಟ್ಟಿದ್ದು ಧೋನಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ನಿಮಗೆ ಧೋನಿ ಬಗ್ಗೆ ಅದೆಷ್ಟು ಹೊಟ್ಟೆ ಕಿಚ್ಚು ಎಂದು ಕೆಲವರು ಲೇವಡಿ ಮಾಡಿದ್ದರೆ, ಇನ್ನು ಕೆಲವರು ಧೋನಿ ಎಂಬ ವ್ಯಕ್ತಿಯ ಬಗ್ಗೆ ಯಾವತ್ತಾದರೂ ಹೆಸರು ಕೇಳಿದ್ದೀರಾ ಎಂದು ಕಾಲೆಳೆದಿದ್ದಾರೆ. ಬೇಕೆಂದೇ ಧೋನಿಯನ್ನು ಅವಮಾನ ಮಾಡಲು ಹೀಗೆ ಹೇಳ್ತಿದ್ದೀರಾ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ಮುಂದಿನ ಸುದ್ದಿ
Show comments