Webdunia - Bharat's app for daily news and videos

Install App

ದೆಹಲಿ ತಂಡದಲ್ಲೂ ಮೂಲೆಗುಂಪಾದ ಗೌತಮ್ ಗಂಭೀರ್!

Webdunia
ಶುಕ್ರವಾರ, 10 ಫೆಬ್ರವರಿ 2017 (11:20 IST)
ನವದೆಹಲಿ: ಫಾರ್ಮ್ ಕಳೆದುಕೊಂಡಿರುವ ಗೌತಮ್ ಗಂಭೀರ್ ಗೆ ಈಗ ಟೀಂ ಇಂಡಿಯಾದಲ್ಲಂತೂ ಸ್ಥಾನವಿಲ್ಲ. ಇದೀಗ ದೆಹಲಿ ತಂಡದಲ್ಲೂ ಕೇಳೋರಿಲ್ಲದಂತಾಗಿದೆ. ಅವರ ಸ್ಥಾನಕ್ಕೆ ಯುವ ಆಟಗಾರ ರಿಷಬ್ ಪಂತ್ ಬಂದಿದ್ದಾರೆ.

 
ಫೆಬ್ರವರಿ 25 ರಿಂದ ಆರಂಭವಾಗಲಿರುವ ವಿಜಯ್ ಹಜಾರೆ ಟ್ರೋಫಿ ಏಕದಿನ ಪಂದ್ಯದಲ್ಲಿ ದೆಹಲಿ ತಂಡಕ್ಕೆ ರಿಷಬ್ ಪಂತ್ ನಾಯಕರಾಗಿ ಆಯ್ಕೆಯಾಗಿದ್ದಾರೆ. ಮುಂದಿನ ಭವಿಷ್ಯದ ದೃಷ್ಟಿಯಿಂದ ಪಂತ್ ರನ್ನು ಆಯ್ಕೆ ಮಾಡಲಾಗಿದೆ ಎಂದು ಆಯ್ಕೆಗಾರರು ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲೂ ಗಂಭೀರ್ ಪ್ರದರ್ಶನ ಉತ್ತಮವಾಗಿರಲಿಲ್ಲ. ಸದ್ಯಕ್ಕೆ ಯುವ ಬ್ಯಾಟ್ಸ್ ಮನ್ ರಿಷಬ್ ಬಗ್ಗೆ ಟೀಂ ಇಂಡಿಯಾದಲ್ಲೂ ಭಾರೀ ನಿರೀಕ್ಷೆಯಿದೆ. ಇನ್ನೂ ಟೀಂ ಇಂಡಿಯಾದಲ್ಲಿ ತಳ ಊರುತ್ತಿರುವ ರಿಷಬ್ ಗೆ ಈಗ ಶಿಖರ್ ಧವನ್,  ಗಂಭೀರ್,  ಆಶಿಷ್ ನೆಹ್ರಾ ಮತ್ತು ಇಶಾಂತ್ ಶರ್ಮಾರಂತಹ ಘಟಾನುಘಟಿಗಳನ್ನು ಮುನ್ನಡೆಸುವ ಅವಕಾಶ ಒದಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments