Webdunia - Bharat's app for daily news and videos

Install App

ಸಹ ಆಟಗಾರನ ಬಗ್ಗೆ ವಿವಾದಿತ ಟ್ವೀಟ್ ಮಾಡಿ ಅಳಿಸಿದ ಹಾರ್ದಿಕ್ ಪಾಂಡ್ಯ

Webdunia
ಮಂಗಳವಾರ, 20 ಜೂನ್ 2017 (09:04 IST)
ಲಂಡನ್: ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಏಕಾಂಗಿಯಾಗಿ ಭಾರತದ ಪರ ರನ್ ಸಿಡಿಸುತ್ತಿದ್ದ ಹಾರ್ದಿಕ್ ಪಾಂಡ್ಯ ರವೀಂದ್ರ ಜಡೇಜಾ ಮಾಡಿದ ತಪ್ಪಿನಿಂದ ರನೌಟ್ ಆಗಿದ್ದು ಎಲ್ಲರಿಗೂ ಗೊತ್ತೇ ಇದೆ.

 
ಇದರಿಂದ ಹಾರ್ದಿಕ್ ಪಾಂಡ್ಯ ಜಡೇಜಾ ಮೇಲೆ ಅಸಮಾಧಾನ ಸೂಚಿಸುತ್ತಲೇ ಹೊರ ನಡೆದಿದ್ದರು. ಆದರೆ ಅವರು ಅಷ್ಟಕ್ಕೇ ಸುಮ್ಮನಾಗಿರಲಿಲ್ಲ. ತಮ್ಮ ಟ್ವಿಟರ್ ಪೇಜ್ ನಲ್ಲಿ ಈ ಬಗ್ಗೆ ಮೆಸೇಜ್ ಮಾಡಿದ್ದರು.

‘ನಮ್ಮನ್ನು ನಾವೇ ಕೊಳ್ಳೆ ಹೊಡೆದುಕೊಂಡೆವು. ಇತರರಿಗೆ ಆ ಸಾಮರ್ಥ್ಯವಿಲ್ಲ’ ಎಂದು ಪರೋಕ್ಷವಾಗಿ ಜಡೇಜಾಗೆ ಟ್ವೀಟ್ ಮೂಲಕ ಟಾಂಗ್ ಕೊಟ್ಟಿದ್ದರು. ಆದರೆ ಈ ಸಂದೇಶ ವಿವಾದವಾಗುವ ಲಕ್ಷಣ ಕಾಣುತ್ತಿದ್ದಂತೆ ಅಳಿಸಿಹಾಕಿದರು.

ಈ ಪಂದ್ಯದಲ್ಲಿ ಉಳಿದ ಬ್ಯಾಟ್ಸ್ ಮನ್ ಗಳು ಒಬ್ಬರಾದ ಮೇಲೆ ಒಬ್ಬರಂತೆ ವಿಕೆಟ್ ಒಪ್ಪಿಸಿ ನಡೆಯುತ್ತಿದ್ದರೆ, ಪಾಂಡ್ಯ ಮಾತ್ರ ಏಕಾಂಗಿಯಾಗಿ ಹೋರಾಡಿ 46 ಎಸೆತಗಳಲ್ಲಿ ಸಿಡಿಲಬ್ಬರದ 76 ರನ್ ಗಳಿಸಿ ಮಿಂಚಿದ್ದರು. ಆದರೂ ಅವರಿಗೆ ಭಾರತದ ಹೀನಾಯ ಸೋಲು ತಪ್ಪಿಸಲಾಗಲಿಲ್ಲ ಎಂಬ ನೋವಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments