Webdunia - Bharat's app for daily news and videos

Install App

ಮುಂಬೈ ತಂಡಕ್ಕೆ ಹ್ಯಾಟ್ರಿಕ್ ಸೋಲು: ಸೋಮನಾಥನ ಮೊರೆ ಹೋದ ಹಾರ್ದಿಕ್ ಪಾಂಡ್ಯ

Sampriya
ಶುಕ್ರವಾರ, 5 ಏಪ್ರಿಲ್ 2024 (22:36 IST)
Photo Courtesy X
ಮುಂಬೈ: ಐಪಿಎಲ್‌ ಆವೃತ್ತಿಯಲ್ಲಿ ಮುಂಬೈ ಸತತ ಸೋಲನ್ನು ಅನುಭವಿಸಿ, ಟ್ರೋಲ್‌ಗೆ ಒಳಗಾದ ಬೆನ್ನಲ್ಲೇ ತಂಡದ ನಾಯಕ  ಹಾರ್ದಿಕ್ ಪಾಂಡ್ಯ ಅವರು  ದೇವರ ಮೊರೆ ಹೋಗಿದ್ದಾರೆ.

ಪಾಂಡ್ಯ ಇಂದು ಗುಜರಾತ್‌ನ ಸೋಮನಾಥ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದ್ದು, ಈ ವಿಡಿಯೋವನ್ನು ದೇವಸ್ಥಾನದ ಸಮಿತಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಈ ಆವೃತ್ತಿಯಲ್ಲಿ ತಾನಾಡಿದ ಮೊದಲ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ವಿರುದ್ಧ 6 ವಿಕೆಟ್‌ ಅಂತರದಿಂದ ಮುಗ್ಗರಿಸಿದ್ದ ಮುಂಬೈ, ನಂತರ ಸನ್‌ರೈಸರ್ಸ್‌ ಹೈದರಾಬಾದ್‌ ಎದುರು 31 ರನ್ ಅಂತರದಿಂದ ಸೋತ್ತಿತ್ತು. ಮೂರನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್‌ ವಿರುದ್ಧ 6 ವಿಕೆಟ್‌ಗಳಿಂದ ಸೋಲೊಪ್ಪಿಕೊಂಡಿದೆ.

ಗುಜರಾತ್ ಟೈಟನ್ಸ್‌ಗೆ ಗುಡ್‌ಬೈ ಹೇಳಿದ ಪಾಂಡ್ಯ ಅವರಿಗೆ ಮುಂಬೈ ತಂಡದ ನಾಯಕನ ಹೊಣೆಯನ್ನು ನೀಡಲಾಗಿತ್ತು. ಆದರೆ ಅವರ ನಾಯಕತ್ವದಲ್ಲಿ ತಂಡ ಕಳಪೆ ಪ್ರದರ್ಶನವನ್ನು ನೀಡಿ, ಸತತ ಸೋಲನ್ನು ಅನುಭವಿಸಿದೆ. ಅದಲ್ಲದೆ ರೋಹಿತ್ ಶರ್ಮಾ ಅವರನ್ನು ನಾಯಕನ ಸ್ಥಾನದಿಂದ ಇಳಿಸಿದ್ದಕ್ಕೆ ಅವರ ಅಭಿಮಾನಿಗಳು ಅಸಮಾಧಾನವಾಗಿದ್ದರು. ಇನ್ನೂ ಸತತ ಸೋಲಿಗೆ ಪಾಂಡ್ಯ ಅವರ ನಾಯಕತ್ವವೇ ಕಾರಣ ಎನ್ನಲಾಗಿದೆ. ಪಂದ್ಯಗಳು ನಡೆಯುವಾಗಲೇ ಹಾರ್ದಿಕ್‌ ವಿರುದ್ಧ ಘೋಷಣೆಗಳನ್ನು ಕೂಗಿ, ಕಿಡಿಕಾರುತ್ತಿದ್ದಾರೆ.

ಈ ಬೆಳವಣಿಗೆ ನಂತರ ಪಾಂಡ್ಯ ಅವರು ದೇವರ ಮೊರೆ ಹೋಗಿದ್ದಾರೆ.


ಏಪ್ರಿಲ್‌ 7ರಂದು ನಡೆಯುವ ಮುಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಸವಾಲು ಎದುರಿಸಲಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments