ಮೈದಾನದಲ್ಲಿ ಸಿಟ್ಟು ಪ್ರದರ್ಶಿಸಿದ್ದ ಧೋನಿ ಪಂದ್ಯ ಮುಗಿದ ಬಳಿಕ ಯುವ ಬೌಲರ್ ಗೆ ಮಾಡಿದ್ದೇನು ಗೊತ್ತಾ?!

Webdunia
ಮಂಗಳವಾರ, 9 ಏಪ್ರಿಲ್ 2019 (09:35 IST)
ಚೆನ್ನೈ: ಧೋನಿ ಮೈದಾನದಲ್ಲಿ ಸಿಟ್ಟು ಮಾಡಿಕೊಳ್ಳುವುದು ಕಡಿಮೆ. ಆದರೆ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಯುವ ಬೌಲರ್ ದೀಪಕ್ ಚಹರ್ ಸತತವಾಗಿ ನೋ ಬಾಲ್ ಎಸೆದಿದ್ದಕ್ಕೆ ಕೂಗಾಡಿದ ವಿಚಾರ ನಿಮಗೆಲ್ಲಾ ಗೊತ್ತೇ ಇದೆ.


ಆದರೆ ಈ ಘಟನೆ ಬಗ್ಗೆ ಇದೀಗ ಬೌಲರ್ ದೀಪಕ್ ಚಹರ್ ಮಾತನಾಡಿದ್ದು, ಧೋನಿಯ ಇನ್ನೊಂದು ಮುಖ ಅನಾವರಣಗೊಳಿಸಿದ್ದಾರೆ. ಇದು ಪ್ರತಿಯೊಬ್ಬ ನಾಯಕನೂ ತಿಳಿದುಕೊಳ್ಳಲೇಬೇಕಾದ ಪಾಠ.

ನೋ ಬಾಲ್ ಎಸೆದಾಗ ಧೋನಿ ಬಾಯ್ ನನ್ನ ಮೇಲೆ ವಿಪರೀತ ಸಿಟ್ಟುಗೊಂಡಿದ್ದರು. ಅವರು ನನ್ನ ಮೇಲೆ ವಿಪರೀತ ಸಿಟ್ಟಾಗಿದ್ದರು. ನಾನು ದೊಡ್ಡ ತಪ್ಪು ಮಾಡಿದ್ದೆ. ನನಗೆ ಅವರು ಹಲವು ವಿಚಾರ ಕೂಗಾಡುತ್ತಲೇ ಹೇಳಿದರು. ಆದರೆ ನನಗೆ ಒಂದೇ ಒಂದು ವಿಚಾರ ತಲೆಯಲ್ಲಿ ಓಡಾಡುತ್ತಿತ್ತು. ಮುಂದೆ ನಾನು ಹೇಗೆ ಬಾಲ್ ಮಾಡಬೇಕೆಂದು. ಆದರೆ ಪಂದ್ಯ ಮುಗಿದ ಬಳಿಕ ಎಲ್ಲರೂ ನನ್ನ ಬಳಿಗೆ ಬಂದು ಚೆನ್ನಾಗಿ ಬಾಲ್ ಮಾಡಿದೆ ಎಂದು ಅಭಿನಂದಿಸಿದರು. ಧೋನಿ ನನ್ನ ಬಳಿ ಬಂದು ನನ್ನನ್ನು ಅಪ್ಪಿಕೊಂಡು, ‘ವೆಲ್ ಡನ್’ ಎಂದರು.ಅಲ್ಲದೆ, ಮುಂದೆ ಎಲ್ಲಾ ಪಂದ್ಯಗಳಲ್ಲಿ ಚೆನ್ನಾಗಿ ಆಡು ಎಂದು ಬೆನ್ನುತಟ್ಟಿದರು’ ಎಂದು ದೀಪಕ್ ಹೇಳಿಕೊಂಡಿದ್ದಾರೆ. ಈ ಮೂಲಕ ಒಬ್ಬ ನಾಯಕನಾಗಿ ಧೋನಿ ಹೇಗೆ ಆಟಗಾರರನ್ನು ಪ್ರೋತ್ಸಾಹಿಸುತ್ತಾರೆ ಎಂದು ಬಹಿರಂಗಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ವಿರಾಟ್ ಕೊಹ್ಲಿ ಕಾಲಿಗೆ ಬೀಳಲು ಮೈದಾನಕ್ಕೇ ನುಗ್ಗಿದ ಅಭಿಮಾನಿ: ಕೊಹ್ಲಿ ಮಾಡಿದ್ದೇನು video

ಮೊದಲ ರನ್ ಗಳಿಸಿದ್ದಕ್ಕೆ ವಿರಾಟ್ ಕೊಹ್ಲಿ ಈ ಪರಿ ಸಂಭ್ರಮಿಸಿದ್ದೇಕೆ Video

IPL 2026: ಕಿಂಗ್ ಕೊಹ್ಲಿ ಸಿಡಿಲಬ್ಬರಕ್ಕೆ ಬೆಚ್ಚಿಬಿದ್ದ ಕೆಕೆಆರ್‌: ಪ್ಲೇ ಆಫ್‌ನತ್ತ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

RCB VS KKR, ಇನ್ನೂ ಶುರುವಾಗದ ಪಂದ್ಯಾಟ, ಕಾರಣ ಇಲ್ಲಿದೆ

RCB vs MI: ನೋವಿನಲ್ಲೂ ಗೆದ್ದು ಬೀಗಿದ ಕ್ರುನಾಲ್‌ ಪಾಂಡ್ಯ, ಗಾಯದ ಫೋಟೋ ಹಂಚಿಕೊಂಡ ಆಲ್‌ರೌಂಡರ್‌

ಮುಂದಿನ ಸುದ್ದಿ
Show comments