Webdunia - Bharat's app for daily news and videos

Install App

ರವಿಶಾಸ್ತ್ರಿ ಕೋಚ್ ಆಗುವುದು ಗಂಗೂಲಿಗೆ ಇಷ್ಟವಿರಲಿಲ್ಲ, ಅದಕ್ಕೆ ಗಂಗೂಲಿ ಮಾಡಿದ್ದು ಏನು ಗೊತ್ತಾ?

Webdunia
ಬುಧವಾರ, 12 ಜುಲೈ 2017 (10:59 IST)
ಮುಂಬೈ: ರವಿಶಾಸ್ತ್ರಿ ಟೀಂ ಇಂಡಿಯಾ ಕೋಚ್ ಆಗುವುದು ಮಾಜಿ ನಾಯಕ ಹಾಗೂ ಕ್ರಿಕೆಟ್ ಸಲಹಾ ಸಮಿತಿ ಸದಸ್ಯರಲ್ಲೊಬ್ಬರಾದ ಸೌರವ್ ಗಂಗೂಲಿಗೆ ಸುತರಾಂ ಇಷ್ಟವಿರಲಿಲ್ಲ.  ಅದಕ್ಕೆ ಕಳೆದ ಬಾರಿ ಕೋಚ್ ಆಯ್ಕೆ ಸಂದರ್ಭ ಇಬ್ಬರ ನಡುವೆ ನಡೆದ ಕೆಸರೆರಚಾಟ.


ಹೀಗಾಗಿ ಶಾಸ್ತ್ರಿ ಕೋಚ್ ಆಗದಂತೆ ಗಂಗೂಲಿ ತಮ್ಮಿಂದಾದ ಪ್ರಯತ್ನ ನಡೆಸಿದ್ದರು. ಇದೇ ಕಾರಣಕ್ಕೆ ಕೋಚ್ ಹೆಸರು ಘೋಷಣೆ ಮಾಡುವಾಗ ಸಾಕಷ್ಟು ಗೊಂದಲಗಳು ನಡೆದವು. ಆದರೆ ಇನ್ನೊಬ್ಬ ಸದಸ್ಯರಾದ ಸಚಿನ್ ತೆಂಡುಲ್ಕರ್ ವೈಯಕ್ತಿಕ ಹಿತಾಸಕ್ತಿಗಿಂತ ತಂಡದ ಹಿತ ಮುಖ್ಯ ಎಂದು ಗಂಗೂಲಿಗೆ ಕಿವಿ ಮಾತು ಹೇಳಿದರು ಎನ್ನಲಾಗಿದೆ.

ಹಾಗಿದ್ದರೂ, ರವಿಶಾಸ್ತ್ರಿಗೆ ಮೂಗುದಾರ ಹಾಕಲು ಗಂಗೂಲಿ ಯಶಸ್ವಿಯಾದರು. ಶಾಸ್ತ್ರಿ ಕೋಚ್ ಆದರೆ ಜಹೀರ್ ಖಾನ್ ಬೌಲಿಂಗ್ ಕೋಚ್ ಆಗಬೇಕೆಂದು ಪಟ್ಟು ಹಿಡಿದರು ಎನ್ನಲಾಗಿದೆ. ಇದರೊಂದಿಗೆ ರವಿಶಾಸ್ತ್ರಿ ಮೆಚ್ಚಿನ ಭರತ್ ಅರುಣ್ ಗೆ ಬೌಲಿಂಗ್ ಕೋಚ್ ಹುದ್ದೆ ಸಿಗಲಿಲ್ಲ.  ಅಲ್ಲದೆ, ದ್ರಾವಿಡ್ ರನ್ನೂ ಬ್ಯಾಟಿಂಗ್ ಸಲಹೆಗಾರರನ್ನಾಗಿ ನೇಮಿಸುವ ಮೂಲಕ ಗಂಗೂಲಿ ರವಿಶಾಸ್ತ್ರಿಗೆ ಎಲ್ಲಾ ಕಡೆಯಿಂದ ನಿರ್ಬಂಧ ಹೇರುವ ಪ್ರಯತ್ನ ನಡೆಸಿದ್ದಾರೆಂದು ಕೆಲವು ಬಿಸಿಸಿಐ ಮೂಲಗಳು ಆಂಗ್ಲ ಮಾಧ್ಯಮಗಳಿಗೆ ಹೇಳಿವೆ.

ಇದನ್ನೂ ಓದಿ.. ಮತ್ತೆ ಜೋಗದ ಗುಂಡಿಗೆ ಹೊಕ್ಕ ಗಣೇಶ್-ಭಟ್ಟರ ಜೋಡಿ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments