Webdunia - Bharat's app for daily news and videos

Install App

ಭಾರತ-ದಕ್ಷಿಣ ಆಫ್ರಿಕಾ ಅಂತಿಮ ಹಣಾಹಣಿ

Webdunia
ಗುರುವಾರ, 8 ಅಕ್ಟೋಬರ್ 2015 (10:18 IST)
ಇಂದು ಭಾರತ-ದಕ್ಷಿಣ ಆಫ್ರಿಕಾ ಮಧ್ಯೆ ಅಂತಿನ ಟಿ-20 ಕಾಳಗ ನಡೆಯಲಿದ್ದು, ಆತಿಥೇಯ ಭಾರತಕ್ಕೆ ಕ್ಲೀನ್ ಸ್ವೀಪ್ ಭೀತಿ ಕಾಡುತ್ತಿದೆ.

ಈಗಾಗಲೇ ಸರಣಿಯನ್ನು ಕಳೆದುಕೊಂಡಿರುವ ಧೋನಿ ಪಡೆ ಕ್ರಿಕೆಟ್ ಕಾಶಿ ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಮಾನ ಉಳಿಸಿಕೊಳ್ಳುವ ಒತ್ತಡದಲ್ಲಿದ್ದರೆ  ಆಫ್ರಿಕಾ ಪಡೆ ಹ್ಯಾಟ್ರಿಕ್ ಗೆಲುವಿನ ತವಕದಲ್ಲಿದೆ.
 
ಧರ್ಮಶಾಲಾದಲ್ಲಿ ನಡೆದ ಪ್ರಥಮ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಭಾರತ ಉತ್ತಮ ಮೊತ್ತವನ್ನು ಪೇರಿಸಲು ಸಫಲವಾಗಿದ್ದರೂ  ಬೌಲರ್ಸ್‍ಗಳು ದುಬಾರಿಯಾಗಿ ಪಂದ್ಯವನ್ನು ಕಳೆದುಕೊಳ್ಳಬೇಕಾಯಿತು. ಕಟಕ್‍ನಲ್ಲಿ ಬ್ಯಾಟಿಂಗ್ ಸಂಪೂರ್ಣ ನೆಲಕಚ್ಚಿತ್ತು. ಹೀಗಾಗಿ ಬ್ಯಾಟಿಂಗ್-ಬೌಲಿಂಗ್ ವೈಫಲ್ಯಗಳನ್ನು ಮೆಟ್ಟಿ ನಿಂತು ಧೋನಿ ಪಡೆ ಗೆಲುವಿನತ್ತ ಗಮನ ಹರಿಸಬೇಕಿದೆ. 
 
ಕಟಕ್‌ನಲ್ಲಿ ಭಾರತ ಅತ್ಯಂತ ಕಳಪೆ ಪ್ರದರ್ಶನ ತೋರಿದ್ದ ಭಾರತ ಪ್ರೇಕ್ಷಕರ ಕೋಪಕ್ಕೆ ಗುರಿಯಾಗಿತ್ತು.  ಕ್ರಿಕೆಟ್ ಅಭಿಮಾನಿಗಳು ಬಾಟಲಿ ಎಸೆದು ವಿರೋಧ ವ್ಯಕ್ತ ಪಡಿಸಿದ್ದರು.  ಹೀಗಾಗಿ ಈ ರೀತಿಯ ಘಟನೆ ಮರುಕಳಿಸದಂತೆ ಇಂದು ಮೈದಾನಕ್ಕೆ ಭದ್ರತೆ ನೀಡಲಾಗಿದೆ.
 
ಸತತ ಎರಡು ಗೆಲುವಿನಿಂದ ಬೀಗುತ್ತಿರುವ ಡೂಪ್ಲಿಸಿಸ್ ಪಡೆ ಕ್ಲಿನ್ ಸ್ವೀಪ್ ಮಾಡಲು ರಣತಂತ್ರ ರೂಪಿಸಿದೆ.  ಪ್ರತಿತಂತ್ರದೊಂದಿಗೆ ಭಾರತ ಮಾನ ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕಿದೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments