Webdunia - Bharat's app for daily news and videos

Install App

ತಂಡದ ಕಿತ್ತು ಹಾಕಿದ ಬಾಸ್ ಗಳಿಗೆ ಖಡಕ್ ಮೆಸೇಜ್ ಕೊಟ್ಟ ಕ್ರಿಕೆಟಿಗ

Webdunia
ಗುರುವಾರ, 2 ನವೆಂಬರ್ 2017 (08:30 IST)
ಬರೋಡಾ: ಟೀಂ ಇಂಡಿಯಾದಲ್ಲಿ ಒಂದು ಕಾಲದಲ್ಲಿ ಸ್ಥಿರ ಸದಸ್ಯನಾಗಿದ್ದ ಇರ್ಫಾನ್ ಪಠಾಣ್ ರನ್ನು ತವರು ಬರೋಡಾ ರಣಜಿ ತಂಡದಿಂದ ಇದ್ದಕ್ಕಿದ್ದಂತೆ ಕಿತ್ತು ಹಾಕಿದ್ದಕ್ಕೆ ಅವರು ಸಿಟ್ಟಿಗೆದ್ದಿದ್ದಾರೆ.

 
ಈ ಸಾಲಿನ ರಣಜಿ ಪಂದ್ಯಾವಳಿಯ ಮೊದಲೆರಡು ಪಂದ್ಯಗಳಿಗೆ ಇರ್ಫಾನ್ ಬರೋಡಾ ತಂಡದ ನಾಯಕರಾಗಿದ್ದರು. ಮೊದಲನೇ ಪಂದ್ಯದಲ್ಲಿ 80 ರನ್ ಸಿಡಿಸಿದ್ದಲ್ಲದೆ, ಎರಡು ಪಂದ್ಯಗಳಿಂದ ಎರಡು ವಿಕೆಟ್ ಕಿತ್ತಿದ್ದರು.

ಆದರೆ ಅಂಕಪಟ್ಟಿಯಲ್ಲಿ ತೀರಾ ಹಿಂದಿರುವ ಬರೋಡಾ ತಂಡದ ನಾಯಕನ ಸ್ಥಾನದಿಂದ ಮೂರನೇ ಪಂದ್ಯಕ್ಕಾಗುವಾಗ ಪಠಾಣ್ ರನ್ನು ಕಾರಣ ನೀಡದೇ ಕಿತ್ತು ಹಾಕಲಾಗಿದೆ. ಅಷ್ಟೇ ಅಲ್ಲದೆ, 15 ಮಂದಿಯ ತಂಡದಲ್ಲಿ ಕೇವಲ ಆಟಗಾರನಾಗಿಯೂ ಪಠಾಣ್ ಗೆ ಸ್ಥಾನ ನೀಡಲಾಗಿಲ್ಲ.

ಇದಕ್ಕೆ ಸಿಟ್ಟಿಗೆದ್ದಿರುವ ಇರ್ಫಾನ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಖಡಕ್ ಉತ್ತರ ನೀಡಿದ್ದಾರೆ. ‘ನಿಮ್ಮ ಬಾಸ್ ಗೆ ಗುಡ್ ಮಾರ್ನಿಂಗ್ ಎಂದು ವಿಶ್ ಮಾಡದೇ ಇರುವುದು, ಎಲ್ಲದಕ್ಕೂ ನೀವೇ ಸರಿ ಎನ್ನುತ್ತಿದ್ದರೆ ಅದು ನಿಮಗೆ ಒಳ್ಳೆಯದು ಮಾಡದು. ಆದರೂ ಪರವಾಗಿಲ್ಲ’ ಎಂದು ಪಠಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ಈ ಟ್ವೀಟ್ ಗೆ ಹಲವು ಮಂದಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments