ಆಗಸ್ಟ್ 5 ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ‘ಎ’ ಮತ್ತು ದಕ್ಷಿಣ ಆಫ್ರಿಕಾ ಎ ತಂಡದ ವಿರುದ್ಧದ ತ್ರಿಕೋನ ಸರಣಿಗೆ ನಾಯಕರಾಗಿ ದೆಹಲಿ ಮೂಲದ ಉನ್ಮುಕ್ತ್ ಚಾಂದ್ ಅವರನ್ನು ಆಯ್ಕೆ ಮಾಡಲಾಗಿದ್ದು, ಕರ್ನಾಟಕದ ಕರುಣ್ ನಾಯರ್ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರ ಫಲವಾಗಿ ಕರುಣ್ ನಾಯರ್ ಅವರನ್ನು ಈ ಅವಕಾಶ ಹುಡುಕಿಕೊಂಡು ಬಂದಿದೆ.
ಕರ್ನಾಟಕದ ಮಯಂಕ್ ಅಗರವಾಲ್ ಮತ್ತು ಮನೀಷ್ ಪಾಂಡೆ ಕೂಡಾ ತಂಡದಲ್ಲಿದ್ದಾರೆ.
ತ್ರಿಕೋನ ಸರಣಿಯ ಬಳಿಕ ಆಗಸ್ಟ್ 18 ರಿಂದ ವಯನಾಡಿನಲ್ಲಿ ದಕ್ಷಿಣ ಆಫ್ರಿಕಾ ಎ ತಂಡದ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದ್ದು, ಅಂಬಾಟಿ ರಾಯುಡು ಅವರು ತಂಡವನ್ನು ಮುನ್ನಡೆಸಲಿದ್ದಾರೆ. ಕರ್ನಾಟಕದ ವೇಗಿ ಅಭಿಮನ್ಯು ಮಿಥುನ್ ತಂಡದಲ್ಲಿದ್ದಾರೆ.