ಅಂಪಾಯರ್ ಗಳ ತಪ್ಪು ತೀರ್ಮಾನದ ವಿಚಾರದಲ್ಲಿ ಇಂಗ್ಲೆಂಡ್ ತಂಡದಲ್ಲೇ ಭಿನ್ನರಾಗ!

Webdunia
ಬುಧವಾರ, 1 ಫೆಬ್ರವರಿ 2017 (10:37 IST)
ಬೆಂಗಳೂರು: ದ್ವಿತೀಯ ಟಿ20 ಪಂದ್ಯದಲ್ಲಿ ಕೊನೆಯ ಓವರ್ ನಲ್ಲಿ ಅಂಪಾಯರ್ ನೀಡಿದ ತಪ್ಪು ತೀರ್ಪಿನಿಂದಾಗಿ ಸರಣಿ ಗೆಲ್ಲುವ ಅವಕಾಶ ಕೈ ತಪ್ಪಿತು ಎಂದು ಇಂಗ್ಲೆಂಡ್ ಕ್ರಿಕೆಟ್ ನಾಯಕ ಇಯಾನ್ ಮಾರ್ಗನ್ ಆರೋಪಿಸಿದ್ದರೆ, ಅವರದೇ ತಂಡದ ಪ್ರಮುಕ ಬ್ಯಾಟ್ಸ್ ಮನ್ ಜೋ ರೂಟ್ ಇದಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ.

 
“ನನಗೆ ಯಾವುದೇ ಪಂದ್ಯದಲ್ಲೂ ಅಂಪಾಯರ್ ಗಳಿಂದ ಸಮಸ್ಯೆ ಆಗಲಿಲ್ಲ. ನಾವು ಕೆಲವೊಮ್ಮೆ ತಪ್ಪು ಮಾಡುತ್ತೇವೆ. ಹಾಗೇ ಅವರೂ ಮನುಷ್ಯರೇ. ಕೆಲವೊಮ್ಮೆ ತಪ್ಪುಗಳಾಗುವುದು ಸಹಜ. ಅದಕ್ಕೆ ಅವರನ್ನು ಹೊಣೆ ಮಾಡುವುದು ಸರಿಯಲ್ಲ” ಎಂದು ಚಿನ್ನಸ್ವಾಮಿ ಮೈದಾನದಲ್ಲಿ ರೂಟ್ ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ ಮೊನ್ನೆ ನಡೆದಿದ್ದು ಸೆಮಿಫೈನಲ್ ಪಂದ್ಯವೇನೂ ಅಲ್ಲ. ಸೆಮಿಫೈನಲ್ ಪಂದ್ಯವಾಗಿದ್ದರೆ, ಅಲ್ಲಿಗೆ ನಮ್ಮ ಟೂರ್ನಮೆಂಟ್ ನಲ್ಲಿ ನಮ್ಮ ಅವಕಾಶ ಮುಗಿಯಿತು ಎಂದು ನಿರಾಶರಾಗಬೇಕಿತ್ತು. ಆದರೆ ಹಾಗೇನೂ ಅಲ್ಲವಲ್ಲ. ಮತ್ತೆ ಯಾಕೆ ತಲೆಕೆಡಿಸಿಕೊಳ್ಳಬೇಕು ಎಂದು ರೂಟ್ ಪ್ರಶ್ನಿಸಿದ್ದಾರೆ.

ಆ ಪಂದ್ಯದಲ್ಲಿ ಬುಮ್ರಾ ಕೊನೆಯ ಓವರ್ ನ್ನು ಚೆನ್ನಾಗಿ ನಿಭಾಯಿಸಿದರು. ಆದರೆ ನಾವೀಗ ಅಂತಿಮ ಪಂದ್ಯದತ್ತ ಗಮನ ಹರಿಸಿದ್ದೇವೆ. ಕಳೆದುದರ ಬಗ್ಗೆ ಚಿಂತಿಸುತ್ತಿಲ್ಲ ಎಂದು ರೂಟ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ಮುಂದಿನ ಸುದ್ದಿ
Show comments