Select Your Language

Notifications

webdunia
webdunia
webdunia
webdunia

ವಿಶ್ವಕಪ್ ಗೆಲ್ಲಿಸಿಕೊಟ್ಟ ಟೀಂ ಇಂಡಿಯಾ ಕ್ರಿಕೆಟಿಗ ಈಗ ಕೊರೋನಾ ಕರ್ತವ್ಯದಲ್ಲಿ!

ವಿಶ್ವಕಪ್ ಗೆಲ್ಲಿಸಿಕೊಟ್ಟ ಟೀಂ ಇಂಡಿಯಾ ಕ್ರಿಕೆಟಿಗ ಈಗ ಕೊರೋನಾ ಕರ್ತವ್ಯದಲ್ಲಿ!
ಮುಂಬೈ , ಸೋಮವಾರ, 30 ಮಾರ್ಚ್ 2020 (09:24 IST)
ಮುಂಬೈ: ಟೀಂ ಇಂಡಿಯಾಕ್ಕೆ 2007 ರಲ್ಲಿ ಪಾಕಿಸ್ತಾನ ವಿರುದ್ಧ ಟಿ20 ವಿಶ್ವಕಪ್ ಗೆಲ್ಲಿಸಿಕೊಟ್ಟ ಆಟಗಾರರಲ್ಲಿ ಪ್ರಮುಖವಾಗಿ ಕೇಳಿಬರುವ ಹೆಸರು ಜೋಗಿಂದರ್ ಶರ್ಮಾರದ್ದು.


ಜೋಗಿಂದರ್ ಶರ್ಮಾ ಅಂದು ಅಂತಿಮ ಓವರ್ ನಲ್ಲಿ ಬಿಗುವಿನ ದಾಳಿ ನಡೆಸಿ ವಿಶ್ವಕಪ್ ಗೆಲುವಿನ ರೂವಾರಿಯಾಗಿದ್ದರು. ಅಂದು ದೇಶಕ್ಕಾಗಿ ವಿಶ್ವಕಪ್ ಗೆಲ್ಲಿಸಿಕೊಟ್ಟ ಜೋಗಿಂದರ್ ಇಂದು ಪೊಲೀಸ್ ಆಗಿ ಕೊರೋನಾ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ.

ಜೋಗಿಂದರ್ ಪೊಲೀಸ್ ಸಮವಸ್ತ್ರದಲ್ಲಿ ಮಾಸ್ಕ್ ಧರಿಸಿ ಕರ್ತವ್ಯ ನಿರ್ವಹಿಸುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೋಗಿಂದರ್ ಕರ್ತವ್ಯ ನಿಷ್ಠೆಗೆ ಸ್ವತಃ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಶಹಬ್ಬಾಷ್ ಗಿರಿ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೋನಾ ಪರಿಹಾರಕ್ಕೆ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಸಹಾಯ