Webdunia - Bharat's app for daily news and videos

Install App

ಈ ಕೇರಳ ಕ್ರಿಕೆಟಿಗನಿಗೆ ಕಾದಿತ್ತು ಗ್ರಹಚಾರ

Webdunia
ಶುಕ್ರವಾರ, 2 ಡಿಸೆಂಬರ್ 2016 (10:58 IST)
ಕೊಚ್ಚಿ: ಈ ಕೇರಳ ಕ್ರಿಕೆಟಿಗನಿಗೆ ಅದೇನಾಗಿತ್ತೋ ಇದ್ದಕ್ಕಿದ್ದಂತೆ ತಂಡದಿಂದ ನಾಪತ್ತೆಯಾದರು. ಸಾಲದೆಂಬಂತೆ ಪಂದ್ಯ ಮುಗಿದ ಮೇಲೆ ಸಿಟ್ಟಿನಲ್ಲಿ ಬ್ಯಾಟ್ ಮುರಿದರು. ಪರಿಣಾಮ ಈಗ ರಾಜ್ಯ ಕ್ರಿಕೆಟ್ ಸಂಸ್ಥೆಯಿಂದ ಶೋಕಾಸ್ ನೋಟೀಸ್ ಪಡೆದಿದ್ದಾರೆ.

ಟೀಂ ಇಂಡಿಯಾ ಪರ ಟಿ-ಟ್ವೆಂಟಿ ತಂಡವನ್ನು ಪ್ರತಿನಿಧಿಸಿದ್ದ ಸಂಜು ಸ್ಯಾಮ್ಸನ್ ಈ ತಪ್ಪು ಮಾಡಿದ ಕ್ರಿಕೆಟಿಗ. 22 ವರ್ಷದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಕೇರಳ ಪರ ರಣಜಿ ಪಂದ್ಯವಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ತಂಡದ ಮ್ಯಾನೇಜ್ ಮೆಂಟ್ ಗೆ ತಿಳಿಸದೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಅಲ್ಲದೆ ಒಂದು ಬ್ಯಾಟ್ ಮುರಿದು ಹಾಕಿದ್ದರು. ತಂಡದ ವ್ಯವಸ್ಥಾಪಕರು ಹಲಾವರು ಬಾರಿ ಕರೆ ಮಾಡಿದರೂ ಅವರು ಪ್ರತಿಕ್ರಿಯಿಸಲಿಲ್ಲ.

ಸದ್ಯ ಕಳಪೆ ಫಾರ್ಮ್ ನಲ್ಲಿರುವ ಕ್ರಿಕೆಟಿಗನ ಈ ದುರ್ವರ್ತನೆ ಸಾಲದೆಂಬಂತೆ ಅವರ ತಂದೆ ಸ್ಯಾಮ್ಸನ್ ಕೆಸಿಎ ಅಧ್ಯಕ್ಷ ಟಿ.ಎಸ್.ಮ್ಯಾಥ್ಯೂಸ್ ಗೆ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿದರು ಎನ್ನಲಾಗಿದೆ. ಆದರೆ ಸ್ಯಾಮ್ಸನ್ ಈ ಆರೋಪಗಳನ್ನು ನಿರಾಕರಿಸಿದ್ದು, ನನ್ನ ಮಗ ನಿರಪರಾಧಿ ಎಂದಿದ್ದಾರೆ. ಏನೇ ಆಗಲಿ ಸಂಜು ಇದೀಗ ಕೆಸಿಎ ನಿಯೋಜಿಸಿದ ನಾಲ್ಕು ಮಂದಿ ಸದಸ್ಯರ ತನಿಖಾ ಸಮಿತಿಯ ಎದುರು ಹಾಜರಾಗಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments