ಕೊಹ್ಲಿಯ ನಿರ್ಧಾರ ಕೆಎಲ್ ರಾಹುಲ್ ಗೆ ಸಂಕಷ್ಟ

Webdunia
ಶುಕ್ರವಾರ, 1 ಸೆಪ್ಟಂಬರ್ 2017 (08:53 IST)
ಕೊಲೊಂಬೊ: ಯಾವುದೇ ಬ್ಯಾಟ್ಸ್ ಮನ್ ಆದರೂ ಕೆಲವು ನಿರ್ದಿಷ್ಟ ಸ್ಥಾನದಲ್ಲಿ ಆಡಿದರಷ್ಟೇ ಯಶಸ್ಸು ಸಾಧ್ಯ. ಅದು ಈಗ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಗೂ ಅನುಭವವಾಗುತ್ತಿದೆ.

 
ರಾಹುಲ್ ಹೇಳಿ ಕೇಳಿ ಹೊಸ ಚೆಂಡಿನೊಂದಿಗೆ ಚೆನ್ನಾಗಿ ಆಡಬಲ್ಲ ಕ್ರಿಕೆಟಿಗ. ಹೀಗಾಗಿಯೇ ಅವರು ಆರಂಭಿಕರಾಗಿ ಸಾಕಷ್ಟು ಯಶಸ್ವಿಯಾಗಿದ್ದಾರೆ. ಹಳೇ ಚೆಂಡಿನೊಂದಿಗೆ ಅವರ ದಾಖಲೆ ಉತ್ತಮವಾಗಿಲ್ಲ.

ಆದರೆ  ಅನಿವಾರ್ಯ ನೋಡಿ. ಸದ್ಯಕ್ಕೆ ಭಾರತ ತಂಡದಲ್ಲಿ ಆರಂಭಿಕ ಸ್ಥಾನಕ್ಕಿರುವಷ್ಟು ಪೈಪೋಟಿ ಇನ್ಯಾವುದಕ್ಕೂ ಇಲ್ಲ. ಶಿಖರ್ ಧವನ್ ಫಾರ್ಮ್ ಕಂಡುಕೊಂಡು ತಂಡಕ್ಕೆ ಬಂದ ಮೇಲೆ ಟೀಂ ಇಂಡಿಯಾ ಚಿಂತಕರಿಗೆ ಬಿಸಿ ತುಪ್ಪವಾಗಿದ್ದಾರೆ.

ರಾಹುಲ್ ಗಾಯಾಳುವಾಗಿ ತಂಡದಿಂದ ಹೊರಗಿದ್ದಾಗ ಅದ್ಭುತ ಪ್ರದರ್ಶನದ ಮೂಲಕ ತಂಡಕ್ಕೆ ಬಂದ ಅವರು ಈಗಲೂ ಅದೇ ಫಾರ್ಮ್ ಮುಂದುವರಿಸಿದ್ದಾರೆ. ಇನ್ನೊಬ್ಬ ಖಾಯಂ ಆರಂಭಿಕ ರೋಹಿತ್ ಶರ್ಮಾ ಕೂಡಾ ಭರ್ಜರಿ ಫಾರ್ಮ್ ನಲ್ಲಿದ್ದಾರೆ. ಹಾಗಾಗಿ ಗಾಯದಿಂದ ಚೇತರಿಸಿಕೊಂಡು ಬರುವಷ್ಟರಲ್ಲಿ ರಾಹುಲ್ ಗೆ ತಮ್ಮ ಎಂದಿನ ಆರಂಭಿಕ ಸ್ಥಾನ ಕೈತಪ್ಪಿದೆ.

ಅನಿವಾರ್ಯವಾಗಿ ಅವರೀಗ ಮಧ್ಯಮ ಕ್ರಮಾಂಕದಲ್ಲಿ ಆಡುತ್ತಿದ್ದಾರೆ. ಇದು ಅವರ ಫಾರ್ಮ್ ಮೇಲೆ ಪರಿಣಾಮ ಬೀರಿದೆ. ಟೆಸ್ಟ್ ನಲ್ಲಿ ಆರಂಭಿಕರಾಗಿದ್ದಾಗ ಎಂದಿನಂತೆ ಉತ್ತಮ ಕೊಡುಗೆ ನೀಡಿದ್ದ ಅವರು ಇದೀಗ ಏಕದಿನ ತಂಡದಲ್ಲಿ ಮಧ್ಯಮ ಕ್ರಮಾಂಕ ಸಿಕ್ಕಿದ ಮೇಲೆ ಮಂಕಾಗಿದ್ದಾರೆ. ಹೇಳಿಕೊಳ್ಳುವಂತಹ ಪ್ರದರ್ಶನ ಬರುತ್ತಿಲ್ಲ. ಇದು ಮುಂದೊಂದು ದಿನ  ತಂಡದಲ್ಲಿ ಅವರ ಸ್ಥಾನಕ್ಕೆ ಸಂಚಾಕಾರ ತಂದರೂ ತರಬಹುದು.

ಕೊಹ್ಲಿ ಕೂಡಾ ತೃತೀಯ ಏಕದಿನ ಪಂದ್ಯದಲ್ಲಿ ತಮ್ಮ ಎಂದಿನ ಮೂರನೇ ಕ್ರಮಾಂಕ ಬಿಟ್ಟು ಬೇರೆ ಕ್ರಮಾಂಕದಲ್ಲಿ ಆಡಲಿಳಿದರು. ಆದರೆ ಯಶಸ್ಸು ಸಿಗಲಿಲ್ಲ. ನಾಲ್ಕನೇ ಪಂದ್ಯದಲ್ಲಿ ಎಂದಿನ ಮೂರನೇ ಕ್ರಮಾಂಕಕ್ಕೆ ಬಂದೊಡನೆ ಶತಕ ಗಳಿಸಿದರು. ಹಾಗೇ ರಾಹುಲ್ ಕೂಡಾ ಮತ್ತೆ ಮೊದಲಿನ ಆರಂಭಿಕ ಸ್ಥಾನಕ್ಕೆ ಬೇಗ  ಬರುವಂತಾಗಲಿ ಎನ್ನುವುದೇ ಅಭಿಮಾನಿಗಳ ಹಾರೈಕೆ.

ಇದನ್ನೂ ಓದಿ.. ಚರ್ಚೆಗೆ ಕಾರಣವಾಯ್ತು ಕೊಹ್ಲಿ ಮಾಡಿದ ಆ ಪ್ರಯೋಗ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli birthday: ಎಂಜಿ ರೋಡ್ ನಲ್ಲಿ ಮೊದಲು ಟ್ಯಾಟೂ ಹಾಕಿಸಿದ್ದ ಕೊಹ್ಲಿ ಆಮೇಲೆ ಮುಚ್ಚಿಟ್ಟಿದ್ದು ಯಾಕೆ

ತಿಲಕ ಬೇಡ ಎಂದ ಸ್ಮೃತಿ ಮಂಧಾನ: ಯಾಕೆ ಹೀಗೆ ನೆಟ್ಟಿಗರ ಪ್ರಶ್ನೆ: video

ಜಯ್ ಶಾ ಎಂದ್ರೆ ಸುಮ್ನೇ ಅಲ್ಲ, ಮಹಿಳಾ ಕ್ರಿಕೆಟ್ ತಾರೆಯರಿಗೆ ಇದಕ್ಕೇ ಜಯ್ ಶಾ ಮೆಲೆ ಪ್ರೀತಿ

ಪ್ರಧಾನಿ ಭೇಟಿಗೆ ಸಿದ್ಧರಾದ ಚಾಂಪಿಯನ್ ಭಾರತ ಮಹಿಳಾ ಕ್ರಿಕೆಟಿಗರು: ಮೋದಿಗೆ ಏನು ಗಿಫ್ಟ್ ಕೊಡಲಿದ್ದಾರೆ

ಹರ್ಮನ್ ಪ್ರೀತ್ ಕೌರ್ ಪಡೆಗಿಲ್ಲ ವಿಕ್ಟರಿ ಪೆರೇಡ್ ಭಾಗ್ಯ: ಇದಕ್ಕೆಲ್ಲಾ ಬೆಂಗಳೂರೇ ಕಾರಣ

ಮುಂದಿನ ಸುದ್ದಿ
Show comments