Webdunia - Bharat's app for daily news and videos

Install App

ಪತ್ರಿಕಾಗೋಷ್ಠಿಯಲ್ಲಿ ಸಿಟ್ಟಿಗೆದ್ದ ಕೆಎಲ್ ರಾಹುಲ್! ಕಾರಣವೇನು?

Webdunia
ಶುಕ್ರವಾರ, 22 ಡಿಸೆಂಬರ್ 2017 (08:54 IST)
ಕಟಕ್: ಕೆಎಲ್ ರಾಹುಲ್ ಸಾಮಾನ್ಯವಾಗಿ ಸಿಟ್ಟಿಗೇಳುವುದು ಕಡಿಮೆ. ಅವರು ಯಾವತ್ತೂ ತಮ್ಮ ಭಾವನೆಗಳನ್ನು ಹೊರಹಾಕಿದವರಲ್ಲ. ಆದರೆ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿಟ್ಟಿಗೆದ್ದಿದ್ದಾರೆ.
 

ಅಷ್ಟಕ್ಕೂ ರಾಹುಲ್ ಸಿಟ್ಟಿಗೇಳಲು ಕಾರಣವೇನು ಗೊತ್ತಾ? ಧೋನಿ ಫಾರ್ಮ್ ಬಗ್ಗೆ ಪತ್ರಕರ್ತರೊಬ್ಬರು ಪ್ರಶ್ನೆ ಮಾಡಿದ್ದಕ್ಕೆ ರಾಹುಲ್ ಕೆರಳಿದರು.

‘ನೀವು ಯಾವ ಫಾರ್ಮ್ ಬಗ್ಗೆ ಕೇಳುತ್ತಿದ್ದೀರಿ? ನಾನು ಪ್ರತೀ ಬಾರಿ ಅವರ ಜತೆ ಆಡುವಾಗಲೂ ಅವರು ತಂಡಕ್ಕಾಗಿ ಉತ್ತಮ ರನ್ ಕಲೆ ಹಾಕಿದ್ದಾರೆ. ನಾವೆಲ್ಲಾ ಏನಾದರೂ ಸಲಹೆ ಬೇಕಾದರೆ ಮೊದಲು ನೋಡುವುದೇ ಧೋನಿ ಕಡೆಗೆ. ಪ್ರತೀ ಪಂದ್ಯದಲ್ಲೂ ಅವರು ಅತ್ಯುತ್ತಮ ಕೊಡುಗೆ ನೀಡುತ್ತಿದ್ದಾರೆ. ಇನ್ನೇನು ಬೇಕು ನಿಮಗೆ?’  ಎಂದು ಕೋಪದಿಂದಲೇ ಕೇಳಿದರು.

ಧೋನಿ ಮತ್ತು ರಾಹುಲ್ ಕಳೆದ ಪಂದ್ಯದಲ್ಲಿ ಭಾರತದ ಪರ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಧೋನಿ 38 ರನ್ ಗಳಿಸಿದ್ದರೆ ರಾಹುಲ್ 61 ರನ್ ಗಳಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments