Webdunia - Bharat's app for daily news and videos

Install App

ನೀ ಲಾಯಕ್ಕಿಲ್ಲ ಎಂದವರಿಗೆ ಮುಟ್ಟಿ ನೋಡಿಕೊಳ್ಳುವಂತೆ ಕೊಟ್ಟ ಕೆಎಲ್ ರಾಹುಲ್!

Webdunia
ಗುರುವಾರ, 21 ಡಿಸೆಂಬರ್ 2017 (09:02 IST)
ಕಟಕ್: ಕೆಎಲ್ ರಾಹುಲ್ ಗೆ ಕಿರು ಮಾದರಿ ಕ್ರಿಕೆಟ್ ನಲ್ಲಿ ಜಾಗವಿಲ್ಲ ಎಂದು ಹೊರ ಹಾಕಿದವರಿಗೆ ನಿನ್ನೆಯ ಲಂಕಾ ವಿರುದ್ಧದ ಟಿ20 ಪಂದ್ಯದಲ್ಲಿ ಕನ್ನಡಿಗ ಬ್ಯಾಟ್ಸ್ ಮನ್ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ನೀಡಿದ್ದಾರೆ.
 

ಶಿಖರ್ ಧವನ್ ಫಾರ್ಮ್ ಗೆ ಮರಳಿದ ಮೇಲೆ ಕೆಎಲ್ ರಾಹುಲ್ ಗೆ ತಂಡದಲ್ಲಿ ಸ್ಥಾನವೇ ಸಿಗುತ್ತಿರಲಿಲ್ಲ. ಸಿಕ್ಕಿದರೂ ಸೂಕ್ತವಲ್ಲದ ಮಧ್ಯಮ ಕ್ರಮಾಂಕದಲ್ಲಿ ಆಡುತ್ತಿದ್ದರು. ಆದರೆ ನಿನ್ನೆಯ ಪಂದ್ಯದಲ್ಲಿ ತಮ್ಮ ಎಂದಿನ ಆರಂಭಿಕ ಸ್ಥಾನ ಸಿಕ್ಕಿದ್ದೇ ತಡ, ರಾಹುಲ್ ಆ ಹತಾಶೆಯನ್ನೆಲ್ಲಾ ಬ್ಯಾಟ್ ಮೂಲಕ ತೀರಿಸಿಕೊಂಡರು.

ತಮಗೆ ಆರಂಭಿಕ ಸ್ಥಾನ ಕೊಟ್ಟರೆ ಎಂತಹಾ ಪ್ರಳಯಾಂತಕ ಎಂದು ತೋರಿಸಿಕೊಟ್ಟರು. ನಿನ್ನೆ ಕೇವಲ 48 ಬಾಲ್ ಗಳಲ್ಲಿ 61 ರನ್ ಸಿಡಿಸಿದರು. ಇದರಲ್ಲಿ 7 ಬೌಂಡರಿ ಮತ್ತು ಒಂದು ಸಿಕ್ಸರ್ ಸಹ ಸೇರಿತ್ತು. ಅವರ ನಿನ್ನೆಯ ಇನಿಂಗ್ಸ್ ನಲ್ಲಿ ಮರಳಿ ಲಯಕ್ಕೆ ಬಂದ ಉತ್ಸಾಹವಿತ್ತು. ಆರಂಭಿಕ ಸ್ಥಾನ ತನಗೆ ಕೊಟ್ಟರೆ ತಾನೆಂತಹ ಅಪಾಯಕಾರಿ ಎಂದು ಅವರು ಈ ಮೂಲಕ ಸಾಬೀತುಪಡಿಸಿದರು.

ವಿಶೇಷವೆಂದರೆ ನಿನ್ನೆಯ ಪಂದ್ಯದಲ್ಲಿ ಮತ್ತೊಬ್ಬ ಕನ್ನಡಿಗ ಬ್ಯಾಟ್ಸ್ ಮನ್ ಮನೀಶ್ ಪಾಂಡೆ ಕೂಡಾ ಚುರುಕಿನ ಆಟವಾಡಿ ಗಮನ ಸೆಳೆದರು. ಮನೀಶ್ ಪಾಂಡೆ ಕೊನೆಯಲ್ಲಿ ಕೇವಲ 18 ಬಾಲ್ ಗಳಿಂದ ತಲಾ ಎರಡು ಸಿಕ್ಸರ್, ಬೌಂಡರಿ ಸಹಿತ 32 ರನ್ ಗಳಿಸಿದ್ದರಿಂದ ತಂಡದ ಮೊತ್ತ ಉಬ್ಬಿತು. ವಿಶೇಷವೆಂದರೆ ಬೌಲಿಂಗ್ ನಲ್ಲಿ ಮಿಂಚಿದ ಯಜುವೇಂದ್ರ ಚಾಹಲ್ ಕೂಡಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರೇ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments