Webdunia - Bharat's app for daily news and videos

Install App

ಮತ್ತೆ ತ್ಯಾಗರಾಜನಾಗಬೇಕಾಗುತ್ತಾ ಕನ್ನಡಿಗ ಕೆಎಲ್ ರಾಹುಲ್?!

Webdunia
ಮಂಗಳವಾರ, 28 ನವೆಂಬರ್ 2017 (08:54 IST)
ನಾಗ್ಪುರ: ಏಕದಿನ ಪಂದ್ಯದಲ್ಲಿ ಶಿಖರ್ ಧವನ್ ಗಾಗಿ ತನ್ನ ಆರಂಭಿಕ ಸ್ಥಾನ ಬಿಟ್ಟುಕೊಟ್ಟು, ಮಧ್ಯಮ ಕ್ರಮಾಂಕದಲ್ಲಿ ಏಗಲು ಆಗದೆ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ತಂಡದಿಂದಲೇ ಔಟ್ ಆದರು. ಇದೀಗ ಟೆಸ್ಟ್ ನಲ್ಲೂ ರಾಹುಲ್ ಗೆ ಅದೇ ಗತಿ ಬರುತ್ತಾ?
 

ಏಕದಿನ ಕ್ರಿಕೆಟ್ ನಲ್ಲಿ ಆದ ಗತಿಯೇ ರಾಹುಲ್ ಗೆ ಟೆಸ್ಟ್ ಕ್ರಿಕೆಟ್ ನಲ್ಲೂ ಆದರೆ ಅಚ್ಚರಿಯಿಲ್ಲ. ಕಳೆದ ಪಂದ್ಯಕ್ಕೆ ಅಲಭ್ಯರಾಗಿದ್ದ ಶಿಖರ್ ಧವನ್ ಮುಂದಿನ ಪಂದ್ಯದಿಂದ ತಂಡದಲ್ಲಿರುತ್ತಾರೆ. ಜತೆಗೆ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಅವಕಾಶ ಪಡೆದಿದ್ದ ಮುರಳಿ ವಿಜಯ್, ರೋಹಿತ್ ಶರ್ಮಾ ಶತಕ ಭಾರಿಸಿ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.

ಹಾಗಾಗಿ ಯಾರನ್ನು ತೆಗೆಯುವುದು, ಯಾರನ್ನು ಉಳಿಸಿಕೊಳ್ಳುವುದು ಎಂಬ ಪ್ರಶ್ನೆ ಬಂದಾಗ ಮೊದಲ ಇನಿಂಗ್ಸ್ ನಲ್ಲಿ ಎರಡೂ ಟೆಸ್ಟ್ ಪಂದ್ಯಗಳಲ್ಲಿ ಹೇಳಿಕೊಳ್ಳುವಂತಹ ಸಾಧನೆ ಮಾಡಿರದ ರಾಹುಲ್ ಮೇಲೆ ನಾಯಕ ಕೊಹ್ಲಿ ಕಣ್ಣು ಬೀಳುವ ಸಾಧ್ಯತೆಯಿದೆ. ಹೀಗಾದಲ್ಲಿ ಪ್ರತಿಭಾವಂತ ರಾಹುಲ್ ಟೆಸ್ಟ್ ಕ್ರಿಕೆಟ್ ನಲ್ಲೂ ಬೆಂಚ್ ಕಾಯಿಸಬೇಕಾಗಬಹುದು.

ಅತ್ತ ದೊಡ್ಡಇನಿಂಗ್ಸ್ ಆಡಲು ವಿಫಲವಾಗುತ್ತಿರುವುದು ಒಂದೆಡೆಯಾದರೆ, ತಂಡದಲ್ಲಿ ಇನ್ನೊಬ್ಬರಿಗಾಗಿ ‘ತ್ಯಾಗ’ರಾಜನಾಗಬೇಕಾದ ಅನಿವಾರ್ಯತೆ. ಒಟ್ಟಾರೆ ರಾಹುಲ್ ಭವಿಷ್ಯ ಕಷ್ಟ… ಕಷ್ಟ..

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

Asian Games 2026: ಏಷ್ಯನ್ ಗೇಮ್ಸ್‌ನಲ್ಲಿ ಭಾರತ vs ಜಪಾನ್ ಮಹಿಳಾ ಕ್ರಿಕೆಟ್ ಪಂದ್ಯ; ಸಮಯ, ತಂಡ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ಮುಂದಿನ ಸುದ್ದಿ
Show comments