ಮತ್ತೆ ತ್ಯಾಗರಾಜನಾಗಬೇಕಾಗುತ್ತಾ ಕನ್ನಡಿಗ ಕೆಎಲ್ ರಾಹುಲ್?!

Webdunia
ಮಂಗಳವಾರ, 28 ನವೆಂಬರ್ 2017 (08:54 IST)
ನಾಗ್ಪುರ: ಏಕದಿನ ಪಂದ್ಯದಲ್ಲಿ ಶಿಖರ್ ಧವನ್ ಗಾಗಿ ತನ್ನ ಆರಂಭಿಕ ಸ್ಥಾನ ಬಿಟ್ಟುಕೊಟ್ಟು, ಮಧ್ಯಮ ಕ್ರಮಾಂಕದಲ್ಲಿ ಏಗಲು ಆಗದೆ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ತಂಡದಿಂದಲೇ ಔಟ್ ಆದರು. ಇದೀಗ ಟೆಸ್ಟ್ ನಲ್ಲೂ ರಾಹುಲ್ ಗೆ ಅದೇ ಗತಿ ಬರುತ್ತಾ?
 

ಏಕದಿನ ಕ್ರಿಕೆಟ್ ನಲ್ಲಿ ಆದ ಗತಿಯೇ ರಾಹುಲ್ ಗೆ ಟೆಸ್ಟ್ ಕ್ರಿಕೆಟ್ ನಲ್ಲೂ ಆದರೆ ಅಚ್ಚರಿಯಿಲ್ಲ. ಕಳೆದ ಪಂದ್ಯಕ್ಕೆ ಅಲಭ್ಯರಾಗಿದ್ದ ಶಿಖರ್ ಧವನ್ ಮುಂದಿನ ಪಂದ್ಯದಿಂದ ತಂಡದಲ್ಲಿರುತ್ತಾರೆ. ಜತೆಗೆ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಅವಕಾಶ ಪಡೆದಿದ್ದ ಮುರಳಿ ವಿಜಯ್, ರೋಹಿತ್ ಶರ್ಮಾ ಶತಕ ಭಾರಿಸಿ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.

ಹಾಗಾಗಿ ಯಾರನ್ನು ತೆಗೆಯುವುದು, ಯಾರನ್ನು ಉಳಿಸಿಕೊಳ್ಳುವುದು ಎಂಬ ಪ್ರಶ್ನೆ ಬಂದಾಗ ಮೊದಲ ಇನಿಂಗ್ಸ್ ನಲ್ಲಿ ಎರಡೂ ಟೆಸ್ಟ್ ಪಂದ್ಯಗಳಲ್ಲಿ ಹೇಳಿಕೊಳ್ಳುವಂತಹ ಸಾಧನೆ ಮಾಡಿರದ ರಾಹುಲ್ ಮೇಲೆ ನಾಯಕ ಕೊಹ್ಲಿ ಕಣ್ಣು ಬೀಳುವ ಸಾಧ್ಯತೆಯಿದೆ. ಹೀಗಾದಲ್ಲಿ ಪ್ರತಿಭಾವಂತ ರಾಹುಲ್ ಟೆಸ್ಟ್ ಕ್ರಿಕೆಟ್ ನಲ್ಲೂ ಬೆಂಚ್ ಕಾಯಿಸಬೇಕಾಗಬಹುದು.

ಅತ್ತ ದೊಡ್ಡಇನಿಂಗ್ಸ್ ಆಡಲು ವಿಫಲವಾಗುತ್ತಿರುವುದು ಒಂದೆಡೆಯಾದರೆ, ತಂಡದಲ್ಲಿ ಇನ್ನೊಬ್ಬರಿಗಾಗಿ ‘ತ್ಯಾಗ’ರಾಜನಾಗಬೇಕಾದ ಅನಿವಾರ್ಯತೆ. ಒಟ್ಟಾರೆ ರಾಹುಲ್ ಭವಿಷ್ಯ ಕಷ್ಟ… ಕಷ್ಟ..

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

FIFA World Cup: ಅರ್ಜೆಂಟೀನಾ ನಿರೀಕ್ಷೆಯೆಲ್ಲಾ ಭಗ್ನವಾಯ್ತು: ಸ್ಪೇನ್ ಹೊಸ ವಿಶ್ವಚಾಂಪಿಯನ್

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಮುಂದಿನ ಸುದ್ದಿ
Show comments