Webdunia - Bharat's app for daily news and videos

Install App

ಟೀಕೆಗಳಿಂದ ಬೇಸತ್ತ ಕೆಎಲ್ ರಾಹುಲ್ ಮೊದಲ ಟೆಸ್ಟ್ ಮುಗಿದ ತಕ್ಷಣವೇ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 11 ಡಿಸೆಂಬರ್ 2018 (09:43 IST)
ಅಡಿಲೇಡ್: ಫಾರ್ಮ್ ನಲ್ಲಿಲ್ಲದ ಆಟಗಾರರ ಮೇಲೆ ಆಳಿಗೊಬ್ಬರಂತೆ ಕಲ್ಲೆಸೆಯುವುದು ಹೊಸತಲ್ಲ. ಇದೀಗ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಗೂ ಅದೇ ಅನುಭವವಾಗಿದೆ.


ಸದ್ಯ ಕಳಪೆ ಫಾರ್ಮ್ ನಲ್ಲಿದ್ದರೂ ತಂಡದಲ್ಲಿ ಅವಕಾಶ ಪಡೆಯುತ್ತಿರುವ ರಾಹುಲ್ ಬಗ್ಗೆ ಎಲ್ಲರೂ ಟೀಕೆ ಮಾಡುತ್ತಿದ್ದಾರೆ. ಮಾಜಿ ಕ್ರಿಕೆಟಿಗರು, ತಜ್ಞರು, ಅಭಿಮಾನಿಗಳು ಅಷ್ಟೇ ಏಕೆ, ತಂಡದ ಬ್ಯಾಟಿಂಗ್ ಕೋಚ್ ಕೂಡಾ ರಾಹುಲ್ ಬ್ಯಾಟಿಂಗ್ ವೈಫಲ್ಯವನ್ನು ಟೀಕಿಸುತ್ತಿದ್ದಾರೆ. ಹೀಗಾಗಿ ಇದನ್ನೆಲ್ಲಾ ಗಂಭೀರವಾಗಿ ಪರಿಗಣಿಸಿರುವ ರಾಹುಲ್ ಮುಂದೆ ಇಂತಹ ತಪ್ಪಾಗದಂತೆ ನೋಡಿಕೊಳ್ಳಲು ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ.

ಒಂದೆಡೆ ಭಾರತ ಮೊದಲ ಟೆಸ್ಟ್ ಗೆದ್ದ ಖುಷಿಯಲ್ಲಿ ಸಂಭ್ರಮಿಸುತ್ತಿದ್ದರೆ ಇತ್ತ ರಾಹುಲ್ ಗೆಲುವನ್ನು ತಲೆಗೆ ತೆಗೆದುಕೊಳ್ಳದೇ ಸೀದಾ ಮತ್ತೆ ಪ್ಯಾಡ್ ಕಟ್ಟಿಕೊಂಡು ಮುಂದಿನ ಟೆಸ್ಟ್ ಪಂದ್ಯಕ್ಕೆ ತಯಾರಾಗಲು ಪ್ರಾಕ್ಟೀಸ್ ಗೆ ತೆರಳಿದ್ದಾರೆ. ಮುಂದಿನ ಪಂದ್ಯದಲ್ಲೂ ಪೃಥ್ವಿ ಶಾ ಆಡದೇ ಇರುವುದರಿಂದ ರಾಹುಲ್ ಗೆ ಅವಕಾಶ ಸಿಕ್ಕೇ ಸಿಗುತ್ತದೆ. ಆದರೆ ಸುಮ್ಮನೇ ಅವಕಾಶ ಪಡೆದೆ ಎಂದು ಟೀಕಾಕಾರರಿಂದ ಹೇಳಿಸಿಕೊಳ್ಳುವ ಬದಲು ತಂಡಕ್ಕೆ ತನ್ನಿಂದ ಕೊಡುಗೆ ನೀಡಲು ಇದೀಗ ರಾಹುಲ್ ಗಂಭೀರವಾಗಿ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೋ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

Gautam Gambhir: ಪೆಟ್ರೋಲ್ ಬಂಕ್ ಫೀಲ್ ಬರ್ತಾ ಇದ್ಯಲ್ಲೋ.. ಟ್ರೋಲ್ ಆಯ್ತು ಟೀಂ ಇಂಡಿಯಾ ಹೊಸ ಜೆರ್ಸಿ

Virat Kohli: ಟ್ರೋಫಿ ಗೆದ್ದಾಗ ಕೊಹ್ಲಿಗೆ ಕಣ್ಣೀರು ಬಂತು, ಅಭಿಮಾನಿ ಸತ್ತಾಗ ಬರಲಿಲ್ಲ ಯಾಕೆ

Gautam Gambhir: ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಗ್ಗೆ ಗೌತಮ್ ಗಂಭೀರ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments